Connect with us

Dvgsuddi Kannada | online news portal | Kannada news online

ರಾಜಸ್ವ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿ ಆಯಾ ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ, ಕಚೇರಿಯಲ್ಲಿ ಲಭ್ಯ ಕಡ್ಡಾಯ: ಸರ್ಕಾರ ಆದೇಶ

govt notice

ದಾವಣಗೆರೆ

ರಾಜಸ್ವ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿ ಆಯಾ ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ, ಕಚೇರಿಯಲ್ಲಿ ಲಭ್ಯ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಆಯಾ ಕಂದಾಯ ವೃತ್ತ, ಕೇಂದ್ರ ಸ್ಥಾನಗಳಲ್ಲಿಯೇ ವಾಸ್ತವ್ಯವಿದ್ದು,‌ ಕರ್ತವ್ಯ ಸಮಯದಲ್ಲಿ ಸಾರ್ವಜನಿಕರಿಗೆ ಲಭ್ಯವಿರುವಂತೆ ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ಇದರಲ್ಲಿ ಲೋಪ-ದೋಷಗಳು ಕಂಡುಬಂದಲ್ಲಿ ತಹಶೀಲ್ದರ್, ಆಯಾ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡಲು ಸೂಚಿಸಲಾಗಿದೆ.

  • ರಾಜಸ್ವ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿ ಆಯಾ ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ, ಕರ್ತವ್ಯ ಸಮಯದಲ್ಲಿ ಕಚೇರಿಯಲ್ಲಿ ಲಭ್ಯ
  • ಸಾರ್ವಜನಿಕರಿಗೆ ಬಹಳ ತೊಂದರೆ ಆಗುತ್ತಿರುವುದಿ ಸರ್ಕಾರದ ಗಮನಕ್ಕೆ ಬಂದಿದೆ‌
  • ಸಾರ್ವಜನಿಕರು ದೂರುಗಳು ಕಂಡುಬಂದಲ್ಲಿ ಆಯಾ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡುವಂತೆ ಸೂಚನೆ

ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಆಯಾ ಕಂದಾಯ ವೃತ್ತ / ಕೇಂದ್ರ ಸ್ಥಾನಗಳಲ್ಲಿ ಕಡ್ಡಾಯವಾಗಿ ವಾಸ್ತವ್ಯವಿದ್ದು ಕರ್ತವ್ಯ ನಿರ್ವಹಿಸುವಂತೆ ಸೂಚನೆ ನೀಡಲಾಗಿರುತ್ತದೆ. ಕೇಂದ್ರ ಸ್ಥಾನಗಳಲ್ಲಿ ವಾಸವಿರದೇ ಸಾರ್ವಜನಿಕರಿಗೆ ಕಚೇರಿ ವೇಳೆಯಲ್ಲಿ ಲಭ್ಯವಾಗದೆ, ಸಾರ್ವಜನಿಕರು ಬಹಳ ತೊಂದರೆ ಆಗುತ್ತಿರುವುದಿ ಸರ್ಕಾರದ ಗಮನಕ್ಕೆ ಬಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಸೂಚನೆಗಳನ್ನು ಎಲ್ಲಾ ರಾಜಸ್ವ ನಿರೀಕ್ಷಕರು | ಗ್ರಾಮ ಆಡಳಿತ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಸಂಬಂಧಪಟ್ಟ ತಹಶೀಲ್ದಾರ್‌ಗಳು ಈ ಕುರಿತು ಪರಿಶೀಲನೆ ನಡೆಸಿ, ದೂರುಗಳು ಹಾಗೂ ಲೋಪ-ದೋಷಗಳು ಕಂಡುಬಂದಲ್ಲಿ ಆಯಾ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡತಕ್ಕದ್ದು.

ಸರ್ಕಾರದ ಸೂಚನೆಗಳನ್ನು ಜಿಲ್ಲಾಧಿಕಾರಿಯವರು ಗಂಭೀರವಾಗಿ ಪರಿಗಣಿಸಿ ಒಂದು ವೇಳೆ ಸಾರ್ವಜನಿಕರಿಗೆ ರಾಜಸ್ವ ನಿರೀಕ್ಷಕರು / ಗ್ರಾಮ ಆಡಳಿತ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಕಛೇರಿಯ ವೇಳೆಯಲ್ಲಿ ಲಭ್ಯವಾಗದೇ ಕೆಲಸ-ಕಾರ್ಯಗಳಿಗೆ ತೊಂದರೆಯಾಗಿರುವುದನ್ನು ಖಚಿತಪಡಿಸಿಕೊಂಡು ಅಂತಹವರ ವಿರುದ್ಧ ನಿಯಮಾಸುಸಾರ ಶಿಸ್ತುಕ್ರಮ ಕೈಗೊಳ್ಳುವಂತೆ ಹಾಗೂ ಕೈಗೊಂಡ ಕ್ರಮದ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top