Connect with us

Dvgsuddi Kannada | online news portal | Kannada news online

ಸರ್ಕಾರಿ ರಸ್ತೆ, ಬಂಡಿ ದಾರಿ ಒತ್ತುವರಿ ತೆರವಿಗೆ ಕ್ರಮ; ಸಚಿವ ಕೃಷ್ಣ ಬೈರೇಗೌಡ

IMG 20240131 125448

ಪ್ರಮುಖ ಸುದ್ದಿ

ಸರ್ಕಾರಿ ರಸ್ತೆ, ಬಂಡಿ ದಾರಿ ಒತ್ತುವರಿ ತೆರವಿಗೆ ಕ್ರಮ; ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಬೀಟ್ ಆ್ಯಪ್‌ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಸರ್ಕಾದ ಜಾಗ, ರಸ್ತೆಗಳು,‌ ಕೃಷಿ ಬಂಡಿ ದಾರಿ ಒತ್ತುವರಿಯಾಗಿದ್ರೆ‌ ಕೂಡಲೇ ತೆರವು ಮಾಡಿಸಲು ಅಧಿಕಾರಿಗಳು ಕಾರ್ಯೋನ್ಮುಖವಾಗಲಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ರಾಜ್ಯಾದ್ಯಂತ ಸರ್ಕಾರಿ ದಾರಿಗಳ ಒತ್ತುವರಿಯ ಬಗ್ಗೆ ಹೆಚ್ಚು ದೂರುಗಳು ಬರುತ್ತಿವೆ. ನಕಾಶೆಯಲ್ಲಿರುವ ದಾರಿಗಳು ಒತ್ತುವರಿ ಆಗಿದ್ದರೆ ಅದನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಅಧಿಕಾರಿಗಳು ಸಹ ಇಂತಹ ರಸ್ತೆಗಳ ತೆರವಿಗೆ ಯಾವುದೇ ನೆಪ ಹೇಳುವಂತಿಲ್ಲ ಎಂದು ಸ್ಪಷ್ಟಪಡಿಸಿದರು. ಸರ್ಕಾರಿ ದಾರಿಯಲ್ಲದೇ ಬಂಡಿ ರಸ್ತೆ ಇದ್ದರೂ ಸಹ ಕೃಷಿ ಚಟುವಟಿಕೆಗಳಿಗೆ ಹೋಗಿ ಬರುವವರಿಗೆ ಯಾವುದೇ ಅಡ್ಡಿ ಮಾಡುವಂತಿಲ್ಲ. ಒಂದು ವೇಳೆ ಅಡ್ಡಿ ಮಾಡಿದರೆ ಅಂಥವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲು ಆದೇಶ ಹೊರಡಿಸಲಾಗಿದೆ ಎಂದರು.

ರಾಜ್ಯಾದ್ಯಂತ ಎಷ್ಟು ಕಡೆ ಒತ್ತುವರಿಯಾಗಿದೆ ಎಂಬ ನಿಖರ ಅಂಕಿ-ಅಂಶವಿಲ್ಲ. ಆದರೆ ಪ್ರತಿ ಹಳ್ಳಿಯಲ್ಲಿಯೂ ಇಂತಹ ಸಮಸ್ಯೆ ಇರುವುದು ಖಚಿತವಾಗಿದೆ.ಸರ್ಕಾರಿ ಸರ್ವೆಯರ್ ಇಂತಹ ಜಾಗಗಳ ಸರ್ವೆ ಮಾಡಬೇಕು. ಒಂದು ತಿಂಗಳಿಗಿಂತ ಹೆಚ್ಚು ಕಾಲ ಅರ್ಜಿ ವಿಲೇವಾರಿ ಮಾಡದಿದ್ದರೆ, ಲೈಸನ್ಸ್ ಪಡೆದಿರುವ ಬೇರೆ ಸರ್ವೆಯರ್ ಮೂಲಕ ಮಾಡಿಸಬೇಕು. ಅರ್ಜಿ ತಾನಾಗಿಯೇ ವರ್ಗಾವಣೆಯಾಗಬೇಕಾಗುತ್ತದೆ ಎಂದರು.

ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಬೀಟ್ ಆ್ಯಪ್ ಅಭಿವೃದ್ದಿ ಮಾಡಲಾಗಿದೆ. ಸರ್ಕಾರಿ ಭೂಮಿಯ ಮಾಹಿತಿ ಅಪ್​ಡೇಟ್ ಮಾಡಲು ಡಿಸೆಂಬರ್ ತನಕ ಅವಕಾಶ ನೀಡಲಾಗಿತ್ತು. ಆದರೆ, ರೈತರಿಗೆ ಪರಿಹಾರ ಹಾಗೂ ಚುನಾವಣಾ ಕೆಲಸ ಬಂದಿದ್ದರಿಂದ ನಿಧಾನವಾಗಿದೆ. ಮಾರ್ಚ್​ನೊಳಗೆ ಸರ್ಕಾರಿ ಭೂಮಿಯ ವಿಸ್ತೀರ್ಣ ಹಾಗೂ ಗಡಿಯನ್ನು ಆಪ್ ಮೂಲಕ ಗುರುತಿಸಲಾಗುತ್ತದೆ. ಅದರ ಆಧಾರದಲ್ಲಿ ಮೊಬೈಲ್ ಆಪ್ ಮೂಲಕ ಜಮೀನಿನ ನಕ್ಷೆ ಸಹ ಸಿದ್ಧವಾಗುತ್ತದೆ. ಡಿಜಿಟಲ್ ಆಗಿ ರೆಕಾರ್ಡ್ ಮಾಡಲಾಗುತ್ತದೆ ಎಂದರು.

ಒತ್ತುವರಿಯನ್ನು ಗುರುತಿಸಿ ಗ್ರಾಮ ಲೆಕ್ಕಾಧಿಕಾರಿಗಳು ತಹಸೀಲ್ದಾರರಿಗೆ ಬೀಟ್ ಆಪ್ ಮೂಲಕವೇ ಮಾಹಿತಿ ನೀಡಬೇಕು. ಅಧಿಕಾರಿಗಳು 15 ದಿನದಲ್ಲಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಪ್ರತಿ ಮೂರು ತಿಂಗಳಿಗೊಮ್ಮೆ ಗ್ರಾಮ ಲೆಕ್ಕಾಧಿಕಾರಿಗಳು ಸರ್ಕಾರಿ ಜಮೀನಿನ ಬಳಿ ಹೋಗಿ ಒತ್ತುವರಿ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಗಮನಿಸಿ ತಹಸೀಲ್ದಾರ್ ಅವರಿಗೆ ಮಾಹಿತಿ ರವಾನಿಸಬೇಕು ಎಂದರು.

ಸರ್ಕಾರಿ ಭೂಮಿಯಲ್ಲಿ ಸಣ್ಣ ರೈತರು ಸಾಗುವಳಿ ಮಾಡುತ್ತ ಸಕ್ರಮಕ್ಕಾಗಿ ಫಾರಂ 57 ಅಥವಾ ಬೇರೆ ರೂಪದಲ್ಲಿ ಅರ್ಜಿ ಸಲ್ಲಿಸಿದ್ದರೆ ಅಂತಹ ಭೂಮಿಯನ್ನು ತೆರವು ಮಾಡಿಸುವುದಿಲ್ಲ. ಒತ್ತುವರಿ ಜಮೀನಿನಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಂಡಿದ್ದರೂ ತೆರವು ಸೂಕ್ತವಲ್ಲ ಎಂಬ ತೀರ್ವನಕ್ಕೆ ಸರ್ಕಾರ ಬಂದಿದೆ. ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top