Connect with us

Dvgsuddi Kannada | online news portal | Kannada news online

ರೈತರಿಗೆ ಯಶಸ್ವಿನಿ ಯೋಜನೆ ನೋಂದಣಿ ಇಂದಿನಿಂದ ಆರಂಭ; ನ.14 ಕೊನೆ ದಿನ; 5 ಲಕ್ಷ ವರೆಗೆ ಆರೋಗ್ಯ ಚಿಕಿತ್ಸೆ ಸೌಲಭ್ಯ

images 49

ದಾವಣಗೆರೆ

ರೈತರಿಗೆ ಯಶಸ್ವಿನಿ ಯೋಜನೆ ನೋಂದಣಿ ಇಂದಿನಿಂದ ಆರಂಭ; ನ.14 ಕೊನೆ ದಿನ; 5 ಲಕ್ಷ ವರೆಗೆ ಆರೋಗ್ಯ ಚಿಕಿತ್ಸೆ ಸೌಲಭ್ಯ

ದಾವಣಗೆರೆ: ರೈತರು, ಸಹಕಾರಿ ಕುಟುಂಬಗಳಿಗೆ ಅನುಕೂಲ ಕಲ್ಪಿಸಲು ಸರ್ಕಾರ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ಇಂದಿನಿಂದ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿ ಆರಂಭವಾಗಲಿದೆ.

ಸಹಕಾರ ಇಲಾಖೆಯು 2022-23 ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಹೊಸ ಸದಸ್ಯರ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ. ನವೆಂಬರ್ 14 ರ ರೊಳಗಾಗಿ ಅರ್ಹರು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆ ಜನವರಿ 1 ರಿಂದ ಜಾರಿಗೆ ಬರಲಿದ್ದು, ರಾಜ್ಯದ ಸಹಕಾರ ಸಂಘಗಳ ಸದಸ್ಯರು ಹಾಗೂ ರೈತ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ಲಾಭ ದೊರೆಯಲಿದೆ.ರಾಜ್ಯದ ಸಹಕಾರಿ ಸಂಘದ ಸದಸ್ಯರು ತಮ್ಮ ಸಹಕಾರಿ ಸಂಘಗಳ ಮೂಲಕ ನಿಗದಿತ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕು.

ನೋಂದಣಿ ಮಾಡಿಕೊಂಡ ನಂತರ ಸಹಕಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ವ್ಯಾಪ್ತಿಗೆ ಒಳಪಡುವ ಯಾವುದೇ ಆಸ್ಪತ್ರೆಯಲ್ಲಿ ವಾರ್ಷಿಕ ಗರಿಷ್ಠ 5 ಲಕ್ಷ ರೂ.ವರೆಗೆ ಚಿಕಿತ್ಸೆ ಪಡೆಯಬಹುದು. ಸದಸ್ಯರಿಗೆ 2023 ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿ ನಂತರ ಮತ್ತೆ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top