ಗ್ರಾಮ‌ ಪಂಚಾಯತಿಯಲ್ಲಿ ಹೊಸ ಬಡಾವಣೆ ಅಭಿವೃದ್ಧಿ; ಅನುಮೋದನೆ ಅಧಿಕಾರ ಗ್ರಾಮ ಪಂಚಾಯತಿಗೆ ನೀಡಿ ಸರ್ಕಾರ ಆದೇಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಬೆಂಗಳೂರು: ಗ್ರಾಮ ಪಂಚಾಯತಿಯಲ್ಲಿ ಹೊಸದಾಗಿ ಬಡಾವಣೆ ನಿರ್ಮಿಸಲು ಮುಂದಾಗಿರುವವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಭೂಪರಿವರ್ತನೆಗೆ ಒಳಗಾದ ಜಮೀನಿನಲ್ಲಿ ಹೊಸದಾಗಿ ಬಡಾವಣೆ ಅಭಿವೃದ್ಧಿ‌ ಮಾಡಿದ್ದಲ್ಲಿ‌, ಅದನ್ನು ಅನುಮೋದನೆ ಅಧಿಕಾರವನ್ನು ಸರ್ಕಾರ ಗ್ರಾಮ ಪಂಚಾಯತಿಗೆ ನೀಡಿ ಸರ್ಕಾರ ಸುತೋಲೆ ಹೊರಡಿಸಿದೆ.

ಭೂಪರಿವರ್ತನೆ ಒಳಗಾದ ಜಮೀನುಗಳಿಗೆ ಮಾತ್ರ ಅನ್ವಯ

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶ ಹೊರತುಪಡಿಸಿದ, ಪ್ರದೇಶಗಳಲ್ಲಿ ಬಡಾವಣೆ ಅಭಿವೃದ್ಧಿಗೆ ನಿಯಮಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯು ರೂಪಿಸಿದೆ. ಅಂದರೆ, ಗ್ರಾಮ ಪಂಚಾಯಿತಿಯ ಸ್ಥಳೀಯ ಯೋಜನಾ ಪ್ರದೇಶದ ಹೊರಗೆ ಇರುವ ಭೂಪರಿವರ್ತನೆಗೆ ಒಳಗಾದ ಜಮೀನುಗಳಿಗೆ ಬಡಾವಣೆ ಅನುಮೋದನೆ ಅಧಿಕಾರ ಗ್ರಾಮ‌ ಪಂಚಾಯತಿಗೆ ಅನ್ವಯ ಆಗಲಿದೆ. ಈ ಬಡಾವಣೆಗಳಲ್ಲಿನ ನಿವೇಶನಗಳಿಗೆ ಗ್ರಾಮ ಪಂಚಾಯಿತಿಯೇ ಖಾತೆ ಮಾಡಿಕೊಡಲಿದೆ. ಭೂಪರಿವರ್ತನೆ ಇಲ್ಲದೆ ಅಭಿವೃದ್ಧಿಪಡಿಸಲಾದ ಬಡಾವಣೆಗಳಿಗೆ ಇದು ಅನ್ವಯವಾಗುವುದಿಲ್ಲ.

ಹೊಸ ಬಡಾವಣೆ ಅಭಿವೃದ್ಧಿಗೆ ಏನೆಲ್ಲಾ ಸೌಲಭ್ಯ ಕಲ್ಪಿಸಬೇಕು..?

ಬಡಾವಣೆ ಅಭಿವೃದ್ಧಿಗಿಂತ ಮುನ್ನ ಸಂಬಂಧಿತ, ಪರಿವರ್ತಿತ ಜಮೀನಿನ ಮಾಲೀಕ ಬಡಾವಣೆಯ ವಿನ್ಯಾಸವನ್ನು ರಚಿಸಬೇಕು. ಬಡಾವಣೆಯಲ್ಲಿ ಇರಲಿರುವ ಸಾರ್ವಜನಿಕ ರಸ್ತೆಗಳು, ಉದ್ಯಾನ, ಚರಂಡಿ, ಒಳಚರಂಡಿ, ನೀರಿನ ಕೊಳವೆ ಮಾರ್ಗ, ತ್ಯಾಜ್ಯ ನೀರು ಸಂಸ್ಕರಣ ಘಟಕ, ವಿದ್ಯುತ್ ಜಾಲಗಳಿಗೆ ಸಂಬಂಧಿತ ಇಲಾಖೆ ಅಥವಾ ಪ್ರಾಧಿಕಾರಗಳಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕು.ಈ ಎಲ್ಲ ದಾಖಲೆಗಳನ್ನು ಒಳಗೊಂಡ ಅರ್ಜಿಯನ್ನು ಗ್ರಾಮ ಪಂಚಾಯಿತಿಗೆ ಸಲ್ಲಿಸಿ, ಬಡಾವಣೆ ಅಭಿವೃದ್ಧಿಪಡಿಸಲು ಅನುಮತಿ ಪಡೆಯಬೇಕು.

ರಸ್ತೆ, ಚರಂಡಿ ‌ಉದ್ಯಾನ ಹಕ್ಕು ಗ್ರಾಮ ಪಂಚಾಯಿತಿಗೆ

ಅಭಿವೃದ್ಧಿಪಡಿಸಲಾದ ಬಡಾವಣೆಯಲ್ಲಿನ ಸಾರ್ವಜನಿಕ ರಸ್ತೆಗಳು, ಉದ್ಯಾನ, ಚರಂಡಿ- ಒಳಚರಂಡಿ ವ್ಯವಸ್ಥೆ, ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳು, ಸಾರ್ವಜನಿಕ ಬಳಕೆಯ ಪ್ರದೇಶಗಳನ್ನು ಹಕ್ಕು ಪರಿತ್ಯಾಜನಾ ಪತ್ರದ ಮೂಲಕ ಗ್ರಾಮ ಪಂಚಾಯಿತಿಗೆ ಬಿಟ್ಟುಕೊಡಬೇಕು. ಹೀಗೆ ಬಿಟ್ಟು ಕೊಟ್ಟ ನಂತರ ಅವುಗಳ ನಿರ್ವಹಣೆಯ ಹೊಣೆಗಾರಿಕೆಯು ಸಂಬಂಧಿತ ಗ್ರಾಮ ಪಂಚಾಯಿತಿಯದ್ದಾಗಿರಲಿದೆ ಎಂದು ವಿವರಿಸಿದೆ.

ಬಡಾವಣೆಯ ಮೂಲೆ ನಿವೇಶನಗಳು, ನಾಗರಿಕ ಬಳಕೆ ನಿವೇಶನಗಳು ಮತ್ತು ಮಧ್ಯಂತರ ನಿವೇಶನಗಳನ್ನು ಅಡಮಾನ ಒಪ್ಪಂದದ ಅಡಿಯಲ್ಲಿ ಗ್ರಾಮ ಪಂಚಾಯಿತಿಗೆ ಒಪ್ಪಿಸಬೇಕು. ನಿಗದಿತ ಅವಧಿಯಲ್ಲಿ ಬಡಾವಣೆಯನ್ನು ಅಭಿವೃದ್ಧಿಪಡಿಸಿದರೆ, ಅಡಮಾನ ಒಪ್ಪಂದವನ್ನು ರದ್ದುಪಡಿಸಬೇಕು ಮತ್ತು ನಿವೇಶನಗಳನ್ನು ಬಡಾವಣೆ ಅಭಿವೃದ್ಧಿದಾರರಿಗೆ ಹಿಂತಿರುಗಿಸಬೇಕು ಎಂದು ಸೂಚಿಸಿದೆ.

ಅಭಿವೃದ್ಧಿಪಡಿಸಲಾದ ಬಡಾವಣೆಯಲ್ಲಿರುವ ಮೂಲಭೂತ ಸೌಕರ್ಯಗಳು ಯಾವುದೇ ದೋಷದಿಂದ ಕೂಡಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ, ಅಭಿವೃದ್ಧಿದಾರರು ಗ್ರಾಮ ಪಂಚಾಯಿತಿಗೆ ಖಾತರಿ ಒದಗಿಸಬೇಕು. ಮೂಲ ಸೌಕರ್ಯ ಅಭಿವೃದ್ಧಿಗೆ ತಗುಲಿರುವ ಒಟ್ಟು ವೆಚ್ಚದ ಶೇ 10ರಷ್ಟನ್ನು ಬ್ಯಾಂಕ್ ಭದ್ರತೆ ರೂಪದಲ್ಲಿ, ಒಂದು ವರ್ಷಕ್ಕೆ ಗ್ರಾಮ ಪಂಚಾಯಿತಿ ಎಂಜಿನಿಯರಿಂಗ್‌ ಇಲಾಖೆಯಲ್ಲಿ ಇರಿಸಬೇಕು. ಒಂದು ವರ್ಷದ ನಂತರ ಅದನ್ನು ವಾಪಸ್‌ ಪಡೆಯಬಹುದಾಗಿದೆ ಎಂದು ತಿಳಿಸಿದೆ.

 ಇತರೆ ಪ್ರಮುಖ ಅಂಶಗಳು

  • ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಸಂಬಂಧಿತ ಇಲಾಖೆ, ಪ್ರಾಧಿಕಾರ ಗಳಿಂದ ವಿನ್ಯಾಸ ಅನುಮೋದನೆ ಪಡೆದ ನಂತರವಷ್ಟೇ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಬೇಕು
  • ಗ್ರಾಮೀಣಾಭಿವೃದ್ಧಿ ಇಲಾಖೆ, ಜಲ ಸಂಪನ್ಮೂಲ ಇಲಾಖೆ, ಎಸ್ಕಾಂಗಳಿಂದ ನಿರಾಕ್ಷೇಪಣಾ ಪತ್ರ ಕಡ್ಡಾಯ
  • ಮೂಲಭೂತ ಸೌಕರ್ಯಗಳ ಅಭಿವೃದ್ಧಿ ವೇಳೆ ಒಟ್ಟು ವೆಚ್ಚದ ಶೇ5 ರಿಂದ ಶೇ10 ರವರೆಗೆ ಮೇಲ್ವಿಚಾರಣಾ ಶುಲ್ಕ ಪಾವತಿಸಬೇಕು
  • ಬಡಾವಣೆಗಳಲ್ಲಿನ ರಸ್ತೆ, ಉದ್ಯಾನ, ಸಾರ್ವಜನಿಕ ಬಳಕೆ ಪ್ರದೇಶ, ನಾಗರಿಕ ಬಳಕೆ ನಿವೇಶನಗಳನ್ನು ಗ್ರಾಮ ಪಂಚಾಯಿತಿಗೆ ಬಿಟ್ಟುಕೊಡುವುದು ಕಡ್ಡಾಯ
Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *