Connect with us

Dvgsuddi Kannada | online news portal | Kannada news online

ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಕ್ರಮ ನಿವೇಶನ, ಮನೆಗಳಿಗೂ ಇ-ಖಾತೆ ನೀಡಲು ಕ್ರಮ; ಸಚಿವ ಪ್ರಿಯಾಂಕ್‌ ಖರ್ಗೆ

grama panchayati

ಪ್ರಮುಖ ಸುದ್ದಿ

ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಕ್ರಮ ನಿವೇಶನ, ಮನೆಗಳಿಗೂ ಇ-ಖಾತೆ ನೀಡಲು ಕ್ರಮ; ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಅಕ್ರಮ ನಿವೇಶನ ಹಾಗೂ ಕಟ್ಟಡಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಕ್ರಮ ಕೈಗೊಳ್ಳುತ್ತಿದ್ದು, 2013ಕ್ಕೆ ಮೊದಲು ಅಥವಾ ನಂತರ ನೋಂದಣಿಯಾದ ಎಲ್ಲಾ ನಿವೇಶನ ಹಾಗೂ ಕಟ್ಟಡಗಳಿಗೂ ಇ-ಖಾತೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ದಾವಣಗೆರೆ: ವಿವಿಧ ಕಡೆ ಬೈಕ್ ಕಳ್ಳತನ ಆರೋಪಿ ಬಂಧನ; 4.80 ಲಕ್ಷ ಮೌಲ್ಯದ ಆರು ಯಮಹಾ Rx ಬೈಕ್ ವಶ

ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ. ಪ್ರಶ್ನೆಗೆ ಉತ್ತರಿಸಿದ ಅವರು, ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 2013ಕ್ಕಿಂತ ಮೊದಲು ನೋಂದಣಿಯಾದ ನಿವೇಶನಗಳಿಗೆ ಇ-ಖಾತಾ ಅಭಿಯಾನ ಮಾಡಲಾಗುತ್ತಿದೆ.

ದಾವಣಗೆರೆ: ಮಾ.07 ಅಡಿಕೆ ಧಾರಣೆ; ಸ್ವಲ್ಪ ಏರಿಕೆ ಕಂಡ ದರ- ಕನಿಷ್ಠ, ಗರಿಷ್ಠ ದರ ಎಷ್ಟಿದೆ..?

ಆದರೆ 2013ರ ನಂತರ ನೋಂದಣಿಯಾದ ನಿವೇಶನಗಳಿಗೆ ಇ-ಖಾತೆ ಮಾಡದೆ ತಿರಸ್ಕಾರ ಮಾಡುತ್ತಿದ್ದು, ಒಂದೇ ಕಡೆ ಎರಡು ರೀತಿಯ ನಿಯಮ ಅನುಸರಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಸಚಿವರು, ಗ್ರಾಪಂಗಳ ವ್ಯಾಪ್ತಿಯಲ್ಲಿ ಕ್ರಮಬದ್ಧವಲ್ಲದ ನಿವೇಶನಗಳು ಮತ್ತು ಕಟ್ಟಡಗಳಿಗೆ ಇ-ಖಾತಾ ನೀಡಲು ಸರ್ಕಾರ ಬದ್ಧವಾಗಿದೆ.

ರಾಜ್ಯ ಬಜೆಟ್; ದಾವಣಗೆರೆ ಜಿಲ್ಲೆಗೆ ಸಿಕ್ಕಿದ್ದೇನು? ಬಜೆಟ್ ಬಗ್ಗೆ ಶಾಮನೂರು ಶಿವಶಂಕರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್ ಏನು ಹೇಳಿದ್ರು..?

ಯಾವುದಕ್ಕೆ ಇ-ಸ್ವತ್ತು; ಸರ್ಕಾರಿ, ಸ್ಥಳೀಯ ಸಂಸ್ಥೆ, ಶಾಸನಬದ್ಧ ಸಂಸ್ಥೆ, ಅರಣ್ಯ ಭೂಮಿಯನ್ನು ಹೊರತುಪಡಿಸಿ ಉಳಿದ ಖಾಸಗಿ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಪ್ರತ್ಯೇಕ ವಹಿಯಲ್ಲಿ ದಾಖಲಿಸಲು ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ-1993ಕ್ಕೆ ತಿದ್ದುಪಡಿ ತರುತ್ತೇವೆ. ಬಳಿಕ ಸೂಕ್ತ ನಿಯಮಗಳನ್ನು ರೂಪಿಸಿ 2013 ಜೂ.14ರ ಮೊದಲು ಹಾಗೂ ನಂತರ ನೋಂದಣಿಯಾದ ಎಲ್ಲಾ ನಿವೇಶನ, ಕಟ್ಟಡಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ಖಾತೆ ನೀಡಲು ಕ್ರಮ ಕೈಗೊಳ್ಳುತ್ತೇವೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top