ವೈದ್ಯರನ್ನು ಮನೆಗೆ ಕರೆಸಿ ಕೊರೊನಾ ಲಸಿಕೆ ಹಾಕಿಸಿಕೊಂಡ ಸಚಿವ ಬಿ.ಸಿ. ಪಾಟೀಲ್..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರೇ ಸರ್ಕಾರಿ ಆಸ್ಪತ್ರೆಗೆ ತೆರಳಿ ಕೊರೊನಾ ಲಸಿಕೆ ಹಾಕಿಸಿ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ರಾಜ್ಯದ ಕೃಷಿ ಸಿಚಿವರು ವೈದ್ಯರನ್ನೇ ಮನೆಗೆ ಕರೆಸಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ.

ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರಿನ ತಮ್ಮ ಮನೆಯಲ್ಲಿ ಸರ್ಕಾರಿ ವೈದ್ಯರಿಂದ ಕೊರೊನಾ ಲಸಿಕೆ ಪಡೆದಿದ್ದಾರೆ. ಪಾಟೀಲ್ ಪತ್ನಿ ಕೂಡ ಮನೆಯಲ್ಲಿಯೇ ಲಸಿಕೆ ಪಡೆದುಕೊಂಡಿದ್ದಾರೆ.ಮನೆಯಲ್ಲಿಯೇ ಕೂತು ಸಚಿವರು ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದಕ್ಕೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನೆಗೆ ವೈದ್ಯರನ್ನು ಕರೆಸಿಕೊಂಡು ಲಸಿಕೆ ಹಾಕಿಸಿಕೊಂಡ ಸಂಬಂಧ  ಸ್ಪಷ್ಟನೆ ನೀಡಿರುವ ಸಚಿವ ಬಿ.ಸಿ ಪಾಟೀಲ್, ಮಾರ್ಗಸೂಚಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ.ನಿನ್ನೆ ತಡವಾಗಿ ಮನೆಗೆ ಬಂದೆ. ಬೆಳಿಗ್ಗೆ ಜನರು ಮನೆ ಬಳಿ ಬಂದಿದ್ದಾರೆ. ಹೀಗಾಗಿ ಮನೆಗೆ ವೈದ್ಯರನ್ನ ಕರೆಸಿ ಲಸಿಕೆ ಹಾಕಿಸಿಕೊಂಡೆ. ಆದರೆ ಆಸ್ಪತ್ರೆಗೆ ಹೋಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂಬ ವಿಚಾರ ಗೊತ್ತಿಲ್ಲ. ವಿಚಾರ ಗೊತ್ತಿದ್ದರೇ ಆಸ್ಪತ್ರೆಗೆ ಹೋಗುತ್ತಿದ್ದೆ ಎಂದು ವಿವರಣೆ ನೀಡಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *