Connect with us

Dvgsuddi Kannada | online news portal | Kannada news online

ಕಳಪೆ ಗುಣಮಟ್ಟದ 17 ಲಕ್ಷ ರೂ. ಮೌಲ್ಯದ ಔಷಧಿ ಮಾರುಕಟ್ಟೆಯಿಂದ ಹಿಂಪಡೆದ ಸರ್ಕಾರ

ಪ್ರಮುಖ ಸುದ್ದಿ

ಕಳಪೆ ಗುಣಮಟ್ಟದ 17 ಲಕ್ಷ ರೂ. ಮೌಲ್ಯದ ಔಷಧಿ ಮಾರುಕಟ್ಟೆಯಿಂದ ಹಿಂಪಡೆದ ಸರ್ಕಾರ

ಬೆಂಗಳೂರು: ಮಾದಕ ಔಷಧಿಗಳ ( ದುರ್ಬಳಕೆ ತಡೆಯುವ ನಿಟ್ಟಿನಲ್ಲಿ 17 ಲಕ್ಷ ರೂ. ಮೌಲ್ಯದ ಕಳಪೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Health Minister Dinesh Gundurao) ತಿಳಿಸಿದ್ದಾರೆ.

ದಾವಣಗೆರೆ: ಇಂದಿನಿಂದ ಫುಲ್ ಹೆಲ್ಮೆಟ್ ಕಡ್ಡಾಯ; ಇಂದಿನಿಂದ ಹಾಫ್ ಹೆಲ್ಮೆಟ್, ಪ್ಲಾಸ್ಟಿಕ್ ಹೆಲ್ಮೆಟ್‌ ಧರಿಸಿದ್ರೆ ದಂಡ

ನಿಯಮ ಉಲ್ಲಂಘನೆ ಕಂಡು ಬಂದ 75 ಸಂಸ್ಥೆಗಳ ವಿರುದ್ಧ ಮೊಕದ್ದ ದಾಕಲಿಸಲು ಸೂಚಿಸಲಾಗಿದೆ. ಇದಲ್ಲದೆ, 400 ಔಷಧ ಮಳಿಗೆಗಳಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿದೆ. 213 ಸಂಸ್ಥೆಗಳ ಪರವಾನಗಿ ಅಮಾನತು ಪಡಿಸಿ, 3 ಔಷಧ ಮಳಿಗೆಗಳ ಪರವಾನಗಿ ರದ್ದುಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕಳಪೆ ಔಷಧಗಳ ವಿರುದ್ಧ ನಮ್ಮ ಸರ್ಕಾರ ಕಢಿಣ ಕ್ರಮಗಳನ್ನು ಕೈಗೊಂಡಿದೆ. ಗುಣಮಟ್ಟದ ಔಷಧಗಳು ಸಾರ್ವಜನಿಕರಿಗೆ ದೊರೆಯದಂತೆ ತಡೆಯಲು, ದಾಸ್ತಾನುಗಳನ್ನು ಹಿಂಪಡೆಯಲು ಕಾನೂನು ರೂಪಿಸಲಾಗುವುದು. ಈಗಾಗಲೇ ನಮ್ಮ ಅಧಿಕಾರಿಗಳು ಔಷಧಗಳ ನಿಯಮಿತ ತಪಾಸಣೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ದಾವಣಗೆರೆ: ಅಂತರ್ ಜಿಲ್ಲೆಯಲ್ಲಿ ಮನೆಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; 10.30 ಲಕ್ಷ ಮೌಲ್ಯದ ಸ್ವತ್ತು ವಶ

ಈವರೆಗೆ 488 ಮಳಿಗೆಗೆಳ ಪರಿಶೀಲನೆ ನಡೆಸಿದ್ದು, ನಿಯಮ ಉಲ್ಲಂಘಿಸಿರುವ 400 ಮಳಿಗೆಗಳಿಗೆ ನೋಟಿಸ್ ನೀಡಲಾಗಿದೆ. 213 ಅಂಗಡಿಗಳ ಪರವಾನಗಿ ಅಮಾನತು ಮಾಡಲಾಗಿದೆ. 17 ಲಕ್ಷ ರೂಪಾಯಿ ಮೌಲ್ಯದ ಔಷಧಗಳನ್ನು ಮಾರುಕಟ್ಟೆಯಿಂದ ವಾಪಸ್ ಕಳುಹಿಸಲಾಗಿದೆ. ಜನರ ಆರೋಗ್ಯ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಯಾವುದೇ ಕಳಪೆ ಔಷಧಗಳು ಸಾರ್ವಜನಿಕರಿಗೆ ತಲುಪದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top