Connect with us

Dvgsuddi Kannada | online news portal | Kannada news online

ಹಿಜಾಬ್ ಧಾರ್ಮಿಕ ಅತ್ಯಗತ್ಯ ಆಚರಣೆಯಲ್ಲ;  ಹೈಕೋಟ್ ಆದೇಶ ಬಗ್ಗೆ ವಕ್ಫ್ ಬೋರ್ಡ್ ನಿಲುವೇನು ..?

high court karnataka

ಪ್ರಮುಖ ಸುದ್ದಿ

ಹಿಜಾಬ್ ಧಾರ್ಮಿಕ ಅತ್ಯಗತ್ಯ ಆಚರಣೆಯಲ್ಲ;  ಹೈಕೋಟ್ ಆದೇಶ ಬಗ್ಗೆ ವಕ್ಫ್ ಬೋರ್ಡ್ ನಿಲುವೇನು ..?

ಬೆಂಗಳೂರು: ಹಿಜಾಬ್ ವಿವಾದಕ್ಕೆ ಪ್ರಕರಣಕ್ಕೆ  ಸಂಬಂಧಿಸಿದಂತೆ  ಹಿಜಾಬ್ ಧಾರಣೆ ಇಸ್ಲಾಂ ಧರ್ಮದ ಧಾರ್ಮಿಕ ಅತ್ಯಗತ್ಯ ಆಚರಣೆಯಲ್ಲ ಎಂದು ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಕ್ಫ್ ಬೋರ್ಡ್‌ ಅಧ್ಯಕ್ಷ ಮೌಲಾನ ಶಫಿ ಸಅದಿ ಹೇಳಿದ್ಧಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣದಲ್ಲಿ  ಹೈಕೋರ್ಟ್‌ ಯಾವ ಆಧಾರದಲ್ಲಿ ತೀರ್ಪು ಕೊಟ್ಟಿದೆ  ಗೊತ್ತಿಲ್ಲ.  ನಾವು ಸಂವಿಧಾನ ಬದ್ಧವಾಗಿ ಕಾನೂನು ಹೋರಾಟ ಮಾಡುತ್ತೇವೆ.  ಹಿಜಾಬ್ ಧರಿಸುವ ಬಗ್ಗೆ ಕುರಾನ್‌ನಲ್ಲಿ ಉಲ್ಲೇಖವಿದೆ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಉಲೆಮಾ ಒಕ್ಕೂಟದಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ಇದು ಸಂವಿಧಾನದ ಬಿಕ್ಕಟ್ಟು. ರಾಜಕೀಯ ಷಡ್ಯಂತ್ರಗಳಿಗೆ ಯಾರೊಬ್ಬರೂ ಬಲಿಯಾಗಬಾರದು. ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಲು ನಮಗೆ ಅವಕಾಶವಿದೆ ಎಂದು  ಹೇಳಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top