Connect with us

Dvgsuddi Kannada | online news portal | Kannada news online

ಹಿಜಾಬ್ ವಿವಾದ: ಹೈಕೋರ್ಟ್ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು ನಾಳೆ ಕರ್ನಾಟಕ ಬಂದ್ ಗೆ ಕರೆ

ಪ್ರಮುಖ ಸುದ್ದಿ

ಹಿಜಾಬ್ ವಿವಾದ: ಹೈಕೋರ್ಟ್ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು ನಾಳೆ ಕರ್ನಾಟಕ ಬಂದ್ ಗೆ ಕರೆ

ಬೆಂಗಳೂರು:  ಶಾಲಾ- ಕಾಲೇಜಿನಲ್ಲಿ ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆ ಅಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪಾಲಿಸಬೇಕು  ಎಂದು ನಿನ್ನೆ (ಮಾ. ​15) ಕರ್ನಾಟಕ ಹೈಕೋರ್ಟ್ ಅಂತಿಮ ತೀರ್ಪು ನೀಡಿತ್ತು. ಈ ಕೋರ್ಟ್ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು  ನಾಳೆ  (ಮಾ .17 ) ಕರ್ನಾಟಕ ಬಂದ್​ಗೆ ಕರೆ ನೀಡಿದ್ದಾರೆ.

ನಾಳೆ ಮುಸ್ಲಿಂ ಸಂಘಟನೆಗಳು ಸ್ವಯಂಪ್ರೇರಿತ ಬಂದ್​ ಗೆ ಕರೆ ನೀಡಿದ್ದು,  ರಾಜ್ಯಾದ್ಯಂತ ಮುಸ್ಲಿಂ ಸಮುದಾಯದವರು  ವ್ಯಾಪಾರ, ವಹಿವಾಟು ನಡೆಸದೇ ಬಂದ್ ಬೆಂಬಲ ನೀಡಲು ನಿರ್ಧರಿಸಿದ್ಧಾರೆ. ಇಂದು ನಡೆದ ಧರ್ಮಗುರುಗಳ ಸಭೆಯಲ್ಲಿ ಮುಸ್ಲಿಂ ಮುಖಂಡ ಸಗೀರ್ ಅಹ್ಮದ್ ಬಂದ್ ಬಗ್ಗೆ ಘೋಷಣೆ ಮಾಡಿದ್ಧಾರೆ.

ಹೈಕೋರ್ಟ್ ತೀರ್ಪಿನಿಂದ ಆತಂಕ ಪಡುವ ಅಗತ್ಯವಿಲ್ಲ. ಸಮವಸ್ತ್ರ ಇರುವಲ್ಲಷ್ಟೇ ಆದೇಶ ಪಾಲನೆ ಮಾಡಲು ಹೇಳಿದೆ. ಸುಪ್ರೀಂ ಕೋರ್ಟ್‌ಗೆ ಹೋಗಲು ಸಹ ನಮಗೆ ಅವಕಾಶ ಇದೆ. ಈಗಾಗಲೇ ಕಪಿಲ್ ಸಿಬಲ್ ಜೊತೆ ಮಾತನಾಡಲಾಗಿದೆ. ಅನಗತ್ಯವಾಗಿ ಸಮಾಜದಲ್ಲಿ ಗೊಂದಲ ಸೃಷ್ಟಿಯಾಗುವುದು ಬೇಡ ಎಂದು ಎಲ್ಲ ನಾಯಕರಿಗೆ ನಿನ್ನೆ ಅಮಿರ್ ಎ ಷರಿಯಾತ್ ಸೂಚನೆ ನೀಡಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top