ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಹೋಟೆಲ್ ಒಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಹೋಟೆಲ್ ಧಗಧಗಿಸಿ ಹೊತ್ತಿ ಉರಿದಿದೆ.
ಬೆಂಗಳೂರಿನ ಗಾಂಧಿನಗರದ ಸಪ್ನಾ ಬುಕ್ ಹೌಸ್ ಬಳಿಯ ಸುಖ್ ಸಾಗರ್ ಹೋಟೆಲ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ವಾಹನಗಳ ಮೂಐಲಕ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಹೋಟೆಲ್ ಕಟ್ಟಡದ ಮೇಲ್ಛಾವಣಿಯಲ್ಲಿ ಒಣ ಕಸ, ರಟ್ಟಿನ ರಾಶಿ ಹಾಕಿದ್ದೇ ಕಾರಣ ಎನ್ನಲಾಗಿದೆ. ಇದಕ್ಕೆ ತಗುಲಿದ ಬೆಂಕಿ ಬಿರು ಬಿಸಿಗೆ ಕಟ್ಟಡಕ್ಕೆ ಆವರಿಸಿದೆ.



