Connect with us

Dvgsuddi Kannada | online news portal | Kannada news online

ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಳಿಯಲ್ಲಿ ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಳಿಯಲ್ಲಿ ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತದಲ್ಲಿ ವಿವಿಧ 43 ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನಿದಲಾಗಿದೆ. ಆನ್‍ಲೈನ್ ಅರ್ಜಿ ಆಹ್ವಾನಿಸಬಹುದು.

ಒಬ್ಬ ಅಭ್ಯರ್ಥಿ ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ಪ್ರತ್ಯೇಕ ಅರ್ಜಿ ಶುಲ್ಕ ಹಾಗೂ ಅರ್ಜಿ ಸಲ್ಲಿಸತಕ್ಕದ್ದು. ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಬರೆಯಲು, ಓದಲು, ಮಾತನಾಡಲು ಬರಬೇಕು. ರಾಜ್ಯಮಟ್ಟದ ಉಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳೆಂದು ವಿಭಾಗ ಮಾಡಿ ಅದರಲ್ಲಿ ಸಾಮಾನ್ಯವರ್ಗ, ಎಸ್ಸಿ, ಎಸ್ಟಿ, ಪ್ರವರ್ಗ 1, 2ಎ, 2ಬಿ, 3ಎ, 3ಬಿ, ಮಹಿಳಾ ಅಭ್ಯರ್ಥಿ, ಗ್ರಾಮೀಣ, ಅಂಗವಿಕಲ, ಇತರೆ ಅಭ್ಯರ್ಥಿಗಳೆಂದು ಮೀಸಲಾತಿ ನಿಗದಿಪಡಿಸಲಾಗಿದೆ.

ಲೆಕ್ಕಿಗರು – 5: ಬಿಕಾಂ/ ಸಹಕಾರ/ ಮ್ಯಾನೇಜ್‍ಮೆಂಟ್‍ನಲ್ಲಿ ಪದವೀಧರರಾಗಿದ್ದು, ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನದ ಜತೆ ಟ್ಯಾಲಿ ಕೋರ್ಸ್ ತಿಳಿದಿರಬೇಕು. ಮಾಸಿಕ 19,000- 34,500 ರೂ. ವೇತನ ಇದೆ.

*ಪ್ರಥಮ ದರ್ಜೆ ಗುಮಾಸ್ತ – 10: ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿದ್ದು, ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು. ಮಾಸಿಕ 13,600- 26,000 ರೂ. ವೇತನ ಇದೆ.

ವಿಕ್ರಯ ಸಹಾಯಕರು – 10: ದ್ವಿತೀಯ ಪಿಯುಸಿ ಉತ್ತೀರ್ಣರಾಗಿದ್ದು, ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಅವಶ್ಯ. ಮಾಸಿಕ 12,500- 24,000 ರೂ. ವೇತನ ನೀಡಲಾಗುವುದು.

ಬೆರಳಚ್ಚುಗಾರ – 8:ದ್ವಿತೀಯ ಪಿಯುಸಿ ಅಥವಾ ಕಮರ್ಷಿಯಲ್ ಪ್ರಾಕ್ಟೀಸ್‍ನಲ್ಲಿ 3 ವರ್ಷದ ಡಿಪ್ಲೋಮಾ ಉತ್ತೀರ್ಣರಾಗುವುದರ ಜತೆಗೆ ಸೀನಿಯರ್ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಉತ್ತೀರ್ಣರಾಗಿರಬೇಕು. ಮಾಸಿಕ 12,500-24,000 ರೂ. ವೇತನ ಇದೆ.

ಜವಾನರು – 10:ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಮಾಸಿಕ 10,400- 16,400 ರೂ. ವೇತನ ನೀಡಲಾಗುವುದು.

ಬ್ಯಾಕ್‍ಲಾಗ್ ಹುದ್ದೆ: ಕಿರಿಯ ಫಾರ್ಮಾಸಿಸ್ಟ್ – 2 ಡಿಪ್ಲೋಮಾ ಇನ್ ಫಾರ್ಮಾಸಿಸ್ಟ್ ಮಾಡಿದ್ದು, ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಅವಶ್ಯ. ಮಾಸಿಕ 14,550-26,700 ರೂ. ವೇತನ ಇದೆ.

ವಯೋಮಿತಿ: ಅರ್ಜಿ ಸಲ್ಲಿಕೆ ಕೊನೇ ದಿನಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ, ಗರಿಷ್ಠ ಸಾಮಾನ್ಯ ವರ್ಗಕ್ಕೆ 35, ಪ್ರವರ್ಗ 2ಎ, 2ಬಿ, 3ಎ, 3ಬಿಗೆ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1ಕ್ಕೆ 40 ವರ್ಷ. ಮಾಜಿ ಸೈನಿಕರಿಗೆ, ಅಂಗವಿಕಲರಿಗೆ, ವಿಧವೆಯರಿಗೆ 10 ವರ್ಷ ವಯೋ ಸಡಿಲಿಕೆ ಇದೆ.

ಅರ್ಜಿಶುಲ್ಕ: ಎಸ್ಸಿ, ಎಸ್ಟಿ, ಪ್ರವರ್ಗ 1ಕ್ಕೆ ಅಂಚೆ ಕಚೇರಿ ಶುಲ್ಕ ಸೇರಿ 530 ರೂ., ಇತರ ಅಭ್ಯರ್ಥಿಗಳಿಗೆ ಅಂಚೆ ಕಚೇರಿ ಶುಲ್ಕ ಸೇರಿ 1030 ರೂ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಶೈಕ್ಷಣಿಕ ಅಂಕ, ಅಗತ್ಯ ದಾಖಲಾತಿಗಳ ಆಧಾರದ ಮೇಲೆ ಶಾರ್ಟ್‍ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಆಹ್ವಾನಿಸಲಾಗುವುದು. ಒಂದು ಹುದ್ದೆಗೆ 1:5 ರ ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆ ದಿನ: 5.4.2021. ಮಾಹಿತಿಗೆ:http://www.recruitapp.in/ksccf2021.

Dvgsuddi.com is a live Kannada news portal. Kannada news online. political, information, crime, film, Sports News in Kannada ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಸಿನಿಮಾ, ಕ್ರೀಡೆ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡಲಾಗುವುದು. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top