Connect with us

Dvgsuddi Kannada | online news portal | Kannada news online

ಬಲವಂತದ ಬಂದ್‌ ಗೆ‌  ಖಡಕ್‌ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ

ರಾಜಕೀಯ

ಬಲವಂತದ ಬಂದ್‌ ಗೆ‌  ಖಡಕ್‌ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ

ನವದೆಹಲಿ: ಮರಾಠ ನಿಗಮ ಸ್ಥಾಪನೆ ವಿರೋಧಿ ಕನ್ನಡಪರ ಸಂಘಟನೆಗಳು  ಡಿಸೆಂಬರ್ 5ರಂದು ಕರ್ನಾಟಕ ಬಂದ್‌ ಗೆ ಕರೆ ನೀಡಿವೆ. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ  ಬಲವಂತ ಅವಕಾಶವಿಲ್ಲ ಎಂದು  ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಮರಾಠಾ ಸಮುದಾಯದವರು ಬೆಳಗಾವಿಯಲ್ಲಿ ಮಾತ್ರವಲ್ಲ, ರಾಜ್ಯದ ಎಲ್ಲ ಭಾಗಗಳಲ್ಲಿಯೂ ಇದ್ದಾರೆ. ಇನ್ನು ಬೆಳಗಾವಿಯ ಮರಾಠಿಗರು ವಿಶ್ವ ಕನ್ನಡ ಸಮ್ಮೇಳನಕ್ಕೆ ಸಂಪೂರ್ಣ ಬೆಂಬಲವನ್ನೂ ನೀಡಿದ್ದರು ಎಂದರು. ಅಲ್ಲದೇ ಮರಾಠಾ ಸಮುದಾಯದಲ್ಲಿನ ಹಿಂದುಳಿದವರ ನೆರವಿಗೆ‌ ಪ್ರಾಧಿಕಾರ ಸ್ಥಾಪಿಸಲಾಗಿದೆ ಎಂದು ಮತ್ತೊಮ್ಮೆ ಉಚ್ಚರಿಸಿದರು.

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್ ಅವರು ಗಡಿ ವಿಚಾರಕ್ಕೆ ಕಿಡಿಕಾರಿದ ಸಿಎಂ,  ರಾಜ್ಯಗಳ ಗಡಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮ. ಅಣ್ಣ- ತಮ್ಮಂದಿರಂತೆ ಇರುವ‌ ಮರಾಠಾ ಮತ್ತು ಕನ್ನಡಿಗರ ನಡುವೆ ದ್ವೇಷ ಭಾವ‌ ಹುಟ್ಟು ಹಾಕುವುದನ್ನು ಸಹಿಸಲಾಗದು ಎಂದು ಅವರು ಸಿಎಂ ಎಚ್ಚರಿಕೆ‌ ನೀಡಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top
(adsbygoogle = window.adsbygoogle || []).push({});