ಬೆಂಗಳೂರು : ಆಸ್ತಿ ವಿವರ ಬಹಿರಂಗ ಪಡಿಸದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಶಾಸಕತ್ವವನ್ನು ಅಸಿಂಧುಗೊಳಿಸುವಂತೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಇದೀಗ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಗೆ ಹೈಕೋರ್ಟ್ 5 ಲಕ್ಷ ದಂಡ ವಿಧಿಸಿ ಆದೇಶಿಸಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು, ಶಾಸಕರಾಗಿ ಆಯ್ಕೆಯಾದ ನಂತರ ಆಸ್ತಿ ವಿವರವನ್ನು ಬಹಿರಂಗ ಪಡಿಸಿರಲಿಲ್ಲ. ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಹೈಕೋರ್ಟ್ ಗೆ ಸಿ.ಕೆ.ಸಿದ್ದರಾಮ ಎಂಬುವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಗೆ ಹಾಜರಾಗುವಂತೆ ಈಶ್ವರ್ ಖಂಡ್ರೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿತ್ತು.
ಖಂಡ್ರೆ ಅವರು ವಿಚಾರಣೆಗೆ ಹಾಜರಾಗದಕ್ಕೆ ಗರಂ ಆದಂತ ನ್ಯಾಯಾಧೀಶರು, 5 ಲಕ್ಷ ದಂಡ ವಿಧಿಸಿದರು. ದಂಡದ ಹಣವನ್ನು ಸಿಎಂ ಕೋವಿಡ್ ನಿಧಿಗೆ ಪಾವತಿಸುವಂತೆ ಆದೇಶಿಸಿದ್ದಾರೆ.



