Connect with us

Dvgsuddi Kannada | online news portal | Kannada news online

ವಿದ್ಯುತ್‌ ಗ್ರಾಹಕರಿಗೆ ಸಿಹಿ ಸುದ್ದಿ; ಪ್ರತಿ ಯುನಿಟ್‌ಗೆ 1.10 ರೂ. ಇಳಿಕೆ

images 2024 01 03T111031.890

ಪ್ರಮುಖ ಸುದ್ದಿ

ವಿದ್ಯುತ್‌ ಗ್ರಾಹಕರಿಗೆ ಸಿಹಿ ಸುದ್ದಿ; ಪ್ರತಿ ಯುನಿಟ್‌ಗೆ 1.10 ರೂ. ಇಳಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ವಿದ್ಯುತ್‌ ದರ ಪರಿಷ್ಕರಣೆ ಮಾಡಿರುವ ಆದೇಶ ಹೊರಡಿಸಿದ್ದು, ಏ.1ರಿಂದಲೇ ಜಾರಿಯಾಗಿದೆ. 100 ಯುನಿಟ್‌ಗಿಂತ ಹಚ್ಚು ವಿದ್ಯುತ್‌ ಬಳಕೆ ಮಾಡುವವರಿಗೆ ಪ್ರತಿ ಯುನಿಟ್‌ಗೆ 1.10 ರು. ಕಡಿಮೆ ಮಾಡಲಾಗಿದೆ.

ಈ ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್‌ ದರ ಕಡಿಮೆಯಾದಂತಾಗಲಿದೆ. 2024-25ನೇ ಸಾಲಿಗೆ ಅನ್ವಯವಾಗುವಂತೆ ಕೆಇಆರ್‌ಸಿ ಮಾಡಿರುವ ದರ ಪರಿಷ್ಕರಣೆ ಆದೇಶದಲ್ಲಿ ಈವರೆಗೆ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ 0-100 ವರೆಗಿನ ಯುನಿಟ್‌ ಹಾಗೂ 100ಕ್ಕಿಂತ ಹೆಚ್ಚು ಯುನಿಟ್ ಬಳಕೆಗೆ ಪ್ರತ್ಯೇಕವಾಗಿದ್ದ ಎಲ್.ಟಿ. ಗೃಹಬಳಕೆ ಶುಲ್ಕದ ಸ್ಲ್ಯಾಬ್‌ ರದ್ದುಪಡಿಸಲಾಗಿದೆ.

ಎಷ್ಟೇ ಯುನಿಟ್ ಬಳಕೆ ಮಾಡಿದರೂ ಪ್ರತಿ ಯುನಿಟ್‌ಗೆ 5.90 ರೂ. ಗಳಂತೆ ದರ ನಿಗದಿ ಮಾಡಿದೆ. ಎಲ್ಲಾ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್‌ ದರ ನಿಗದಿ ಮಾಡಿದೆ. ಇದರಿಂದ 100ಕ್ಕಿಂತ ಹೆಚ್ಚು ಯುನಿಟ್‌ ಬಳಕೆ ಮಾಡುವವರಿಗೆ 7 ರೂ. ಬದಲಿಗೆ ಪ್ರತಿ ಯುನಿಟ್‌ಗೆ 5.90 ರು. ಮಾತ್ರ ಶುಲ್ಕ ವಿಧಿಸಲಾಗುತ್ತದೆ. ಇದು 15 ವರ್ಷಗಳ ಬಳಿಕ ವಿದ್ಯುತ್‌ ದರ ಇಳಿಕೆ ಮಾಡಲಾಗಿದೆ.

ಇನ್ನು 100 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಈವರೆಗೆ ಪ್ರತಿ ಯುನಿಟ್‌ಗೆ 4.75 ರು. ನಿಗದಿ ಮಾಡಲಾಗಿತ್ತು. ಈಗ ಇದನ್ನು 5.90 ರೂ.ಗೆ ಹೆಚ್ಚಳ ಮಾಡಲಾಗಿದೆ. 100 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಪ್ರತಿ ಯುನಿಟ್‌ಗೆ 1.15 ರೂ. ಶುಲ್ಕ ಹೆಚ್ಚಳ ಹೊರೆ ಬೀಳಲಿದೆ. ಆದರೆ, 100 ಯುನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಕೆ ಮಾಡುವ ಶೇ.97 ರಷ್ಟು ವಿದ್ಯುತ್‌ ಬಳಕೆದಾರರು ಈಗಾಗಲೇ ಗೃಹಜ್ಯೋತಿ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.

ಇನ್ನೂ ಎಲ್‌ಟಿ ಸಂಪರ್ಕ ಹೊಂದಿರುವ ಆಸ್ಪತ್ರೆಗಳು, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪ್ರತಿ ಯುನಿಟ್‌ಗೆ 7.75 ರೂ. ನಿಗದಿ ಮಾಡಿದ್ದ ಶುಲ್ಕವನ್ನು 7.25 ರೂ.ಗೆ (50 ಪೈಸೆ ಇಳಿಕೆ) ಇಳಿಕೆ ಮಾಡಲಾಗಿದೆ. ಎಲ್‌.ಟಿ. ವಾಣಿಜ್ಯ ಬಳಕೆಯ ಸಂಪರ್ಕಗಳಿಗೆ ಡಿಮ್ಯಾಂಡ್‌ ಆಧಾರದ ಶುಲ್ಕ ನಿಗದಿ ಮಾಡಿದ್ದು ಹಿಂದಿನ ಸ್ಲ್ಯಾಬ್‌ ಪದ್ಧತಿ ರದ್ದುಪಡಿಸಲಾಗಿದೆ. ಪ್ರತಿ ಯುನಿಟ್‌ಗೆ 8.50 ರೂ. ಇದ್ದ ಬೆಲೆಯನ್ನು 8 ರೂ.ಗೆ ಇಳಿಕೆ ಮಾಡಿದೆ. ಹೀಗಾಗಿ ವಾಣಿಜ್ಯ ಬಳಕೆದಾರಿಗೂ ಅನುಕೂಲವಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • astrology today astrology today

    ಪ್ರಮುಖ ಸುದ್ದಿ

    ಭಾನುವಾರದ ರಾಶಿ ಭವಿಷ್ಯ 01 ಜೂನ್ 2025

    By

    ಈ ರಾಶಿಯವರಿಗೆ ವಿದೇಶ ಯೋಗ, ಈ ರಾಶಿಯವರಿಗೆ ಮದುವೆ ಯೋಗ, ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ, ಭಾನುವಾರದ ರಾಶಿ ಭವಿಷ್ಯ 01...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 31 ಮೇ 2025

    By

    ಈ ರಾಶಿಯ ಕಲಾವಿದರಿಗೆ ಶುಭ ಸಂದೇಶ, ಈ ರಾಶಿಯವರಿಗೆ ಎಲ್ಲಾ ಇದ್ದು ಏನೂ ಕೈಗೂಡುತ್ತಿಲ್ಲ, ಶನಿವಾರದ ರಾಶಿ ಭವಿಷ್ಯ 31 ಮೇ...

  • astrology today astrology today

    ಪ್ರಮುಖ ಸುದ್ದಿ

    ಶುಕ್ರವಾರದ ರಾಶಿ ಭವಿಷ್ಯ 30 ಮೇ 2025

    By

    ಈ ರಾಶಿಯವರ ವ್ಯಾಪಾರಕ್ಕೆ ಗ್ರಾಹಕರ ಕೊರತೆ, ಈ ರಾಶಿಯವರ ಮದುವೆಗೆ ಬಂದ ಸಂಬಂಧ ಫಿಕ್ಸ್ ಆಗುತ್ತಿಲ್ಲ , ಶುಕ್ರವಾರದ ರಾಶಿ ಭವಿಷ್ಯ...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 29 ಮೇ 2025

    By

    ಈ ರಾಶಿಯವರಿಗೆ ಬಂಪರ್, ಈ ರಾಶಿಯವರಿಗೆ ಮದುವೆ ಯೋಗ, ಈ ರಾಶಿ ದಂಪತಿಗಳಿಗೆ ಸಂತಾನ ಭಾಗ್ಯ, ಗುರುವಾರದ ರಾಶಿ ಭವಿಷ್ಯ 29...

To Top