Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಇನ್ನೂ ಇದೆ ಭಾರೀ ಮಳೆ, ಪ್ರಕೃತಿ ವಿಕೋಪ; ಕೋಡಿಮಠದ ಶ್ರೀ ಸ್ಫೋಟಕ ಭವಿಷ್ಯ; ರಾಜಕೀಯ ಬೆಳವಣಿಗೆ ಬಗ್ಗೆ ಮಹತ್ವದ ಹೇಳಿಕೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಇನ್ನೂ ಇದೆ ಭಾರೀ ಮಳೆ, ಪ್ರಕೃತಿ ವಿಕೋಪ; ಕೋಡಿಮಠದ ಶ್ರೀ ಸ್ಫೋಟಕ ಭವಿಷ್ಯ; ರಾಜಕೀಯ ಬೆಳವಣಿಗೆ ಬಗ್ಗೆ ಮಹತ್ವದ ಹೇಳಿಕೆ

ಹಾಸನ: ರಾಜ್ಯದ ಪ್ರಾಕೃತಿಕ ಸ್ಥಿತಿಗತಿ ಮತ್ತು ರಾಜಕೀಯ ಬೆಳವಣಿಗೆ ಬಗ್ಗೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿ ಮತ್ತೊಮ್ಮೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ರಾಜ್ಯದಲ್ಲಿ ಮಳೆಯಿಂದ ಇನ್ನೂ ಜಾಸ್ತಿ ತೊಂದರೆ ಇದೆ. ಭೂಮಿ, ಅಗ್ನಿ, ವಾಯು, ಆಕಾಶ ಸೇರಿ ಎಲ್ಲಾ ಕಡೆಯಿಂದ ರಾಜ್ಯಕ್ಕೆ ತೊಂದರೆ ಇದೆ. ಆಕಾಶದಿಂದ ಕೂಡ ದೊಡ್ಡ ಸುದ್ದಿ ಬರಬಹುದು ಎಂದು ಅವರು ಹೇಳಿದ್ದಾರೆ.

ಜನ ಇದ್ದಂಗೆ ಸಾಯುತ್ತಾರೆ. ಭೂಮಿ ಬಿರುಕು ಬಿಡುತ್ತದೆ ಎಂದಿದ್ದೆ. ಗುಡ್ಡ ಹೋಗುತ್ತದೆ ಎಂದು ಹೇಳಿದ್ದೆ. ಪ್ರವಾಹದಲ್ಲಿ ಜಗತ್ತಿನಾದ್ಯಂತ ಅನೇಕ ಪ್ರದೇಶಗಳು ಮುಳುಗುತ್ತವೆ ಎಂದು ಹೇಳಿದ್ದೆ. ಇನ್ನೂ ಮಳೆ ಇದೆ, ಅದರಲ್ಲಿ ಇನ್ನೂ ಅನಾಹುತಗಳಾಗಲಿವೆ. ಒಂದು ಆಕಾಶ ತತ್ವ ಪ್ರಕಾರ ತೊಂದರೆ ಆಗಬಹುದು. ಅದು ರಾಜನ ಮೇಲೆ ಭಂಗ ಬೀರಲಿದೆ ಎಂದು ಅವರು ಹೇಳಿದ್ದಾರೆ.

ರಾಜಕೀಯ ಬೆಳವಣಿಗೆ; ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕಟ್ ಮಾಡಿಸಿದರು. ಮಹಾಭಾರತದಲ್ಲಿ ಕೃಷ್ಣ ಇದ್ದ, ಗದಾಯುದ್ಧದಲ್ಲಿ ಭೀಮ ಗೆದ್ದ. ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ಲುತ್ತಾನೆ ಎಂದು ಕಳೆದ ತಿಂಗಳೇ ಹೇಳಿದ್ದೆ ಎಂದರು. ಈ  ಮೂಲಕ ಕೇಂದ್ರ ರಾಜ್ಯದಲ್ಲಿ ಅದಿಕಾರ ಚುಕ್ಕಾಣಿ ಹಿಡಿದವರ ಬದಲಾವಣೆ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top