Connect with us

Dvgsuddi Kannada | online news portal | Kannada news online

ಭೀಕರ ಅಪಘಾತ: ನಿಶ್ಚಿತಾರ್ಥಕ್ಕೆ  ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿ; ನಾಲ್ವರ ದುರ್ಮರಣ

ಪ್ರಮುಖ ಸುದ್ದಿ

ಭೀಕರ ಅಪಘಾತ: ನಿಶ್ಚಿತಾರ್ಥಕ್ಕೆ  ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿ; ನಾಲ್ವರ ದುರ್ಮರಣ

ಕೊಪ್ಪಳ: ರಸ್ತೆಯಲ್ಲಿ ಸಾಗುತ್ತಿದ್ದ ಟ್ರ್ಯಾಕ್ಟರ್ ಓವರ್ ಲೋಡ್ ನಿಂದ  ಏಕಾಏಕಿ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ  ಇಬ್ಬರು ದುರ್ಮರಣ ಹೊಂದಿದ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ನವಲಿಯಲ್ಲಿ ನಡೆದಿದೆ.

ನಿಶ್ಚಿತಾರ್ಥಕ್ಕೆ ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದ್ದು, ಯಮನೂರಪ್ಪ(55) ಮತ್ತು ಅಂಬಮ್ಮ(50) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.  ಶೇಶಪ್ಪ ಬಂಡಿ (40) ಮತ್ತು ಯಮನಪ್ಪ ಸಿಂಧನೂರು (35) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.  ಎಲ್ಲರೂ ಕೊಪ್ಪಳದ ಕಾರಟಗಿಯ ಪಟ್ಟಣದ ಇಂದ್ರನಗರ ನಿವಾಸಿಗಳು. ಇನ್ನು ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಕಾರಟಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ನವಲಿ ಗ್ರಾಮದ ಬಳಿಯ ರೈಸ್ ಟೆಕ್ನಾಲಜಿ ‌ಪಾರ್ಕ್ ಬಳಿ ಈ ದುರ್ಘಟನೆ ನಡೆದಿದ್ದು, ಮೃತರು ಕಾರಟಗಿ ಪಟ್ಟಣದ 18ನೇ ವಾರ್ಡ್ ನ ನಿವಾಸಿಗಳಾಗಿದ್ದಾರೆ. ಕಾರಟಗಿಯಿಂದ ಕನಕಗಿರಿಯ ಸಿರವಾರ ಕಡೆಗೆ ಟ್ರ್ಯಾಕ್ಟರ್ ಹೊರಟಿತ್ತು. 25ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದು,  ಓವರ್ ಲೋಡ್  ಅಪಘಾತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ.   ಸ್ಥಳಕ್ಕೆ ಡಿವೈಎಸ್ಪಿ ಸೇರಿದಂತೆ ಕನಕಗಿರಿ ಪೊಲೀಸರು ಭೇಟಿ ನೀಡಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top