ರಿಯಾಯಿತಿ ದರದ ಹೊಸ, ನವೀಕರಣ ಬಸ್ ಪಾಸ್ ಗೆ ಅರ್ಜಿ ಆಹ್ವಾನ; ಯಾವ ದಾಖಲೆ ಬೇಕು..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ)  ಪ್ರಸಕ್ತ ಸಾಲಿನ ವಿಕಲಚೇತನ ಫಲಾನುಭವಿಗಳು ರಿಯಾಯಿತಿ ದರದ ಬಸ್‍ಪಾಸ್ (ಹೊಸ, ನವೀಕರಣ) ಗಳನ್ನು ಪಡೆಯಲು ಸೇವಾ ಸಿಂಧು ಫೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸೇವಾ ಸಿಂಧು ಪೋರ್ಟಲ್ ನಲ್ಲಿ http://serviceonline.gov.in/karnatka/ ನಲ್ಲಿ ಘಟಕ ವ್ಯವಸ್ಥಾಪಕರ ಕೌಂಟರ್ (ಐಡಿ) ಗೆ ಅರ್ಜಿ ಸಲ್ಲಿಸಬಹುದು. ಮತ್ತು ಹೊಸ ಪಾಸ್ ಗಳನ್ನು ಪಡೆಯಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ದಾವಣಗೆರೆ ವಿಭಾಗ ರವರ ಕೌಂಟರ್ (ಐಡಿ) ಗೆ ಅರ್ಜಿ ಸಲ್ಲಿಸಬೇಕು.

ಪಾಸ್ ನವೀಕರಣ ಮಾಡಿಸಿಕೊಳ್ಳುವ ವಿತರಣಾ ಕೇಂದ್ರಗಳು: ಜನವರಿ 1 ರಿಂದ ಫೆಬ್ರವರಿ 28 ರವರೆಗೆ ದಾವಣಗೆರೆ ಬಸ್ ನಿಲ್ದಾಣದಲ್ಲಿ ದಾವಣಗೆರೆ, ಜಗಳೂರು, ಚನ್ನಗಿರಿ ಫಲಾನುಭವಿಗಳು ನವೀಕರಣ ಮಾಡಿಸಿಕೊಳ್ಳಬಹುದು. ಜನವರಿ 1 ರಿಂದ ಫೆಬ್ರವರಿ 28 ರವರೆಗೆ ಹರಿಹರ ಬಸ್ ನಿಲ್ದಾಣದಲ್ಲಿ ಹರಿಹರ ಫಲಾನುಭವಿಗಳು ಪಾಸ್ ನವೀಕರಣ ಮಾಡಿಸಿಕೊಳ್ಳಬಹುದು.

ಯಾವ ದಾಖಲೆ ಬೇಕು..?: ವಿಕಲಚೇತನ ಫಲಾನುಭವಿಗಳು ಆನ್ ಲೈನ್ ನಲ್ಲಿ ಸಂಬಂಧಪಟ್ಟ ದಾಖಲೆಗಳನ್ನು (ಯುಡಿಐಡಿ ಕಾರ್ಡ್, ಆಧಾರ್ ಕಾರ್ಡ್, ಅಂಗವಿಕಲರ ಗುರುತಿನ ಚೀಟಿ, ಪೋಟೋ) ಆಫ್ ಲೋಡ್ ಮಾಡುವುದು ಕಡ್ಡಾಯ. ಹಾಗೂ ಭೌತಿಕವಾಗಿ ಪಾಸ್ ಪಡೆಯಲು ಬಂದಾಗ ಮೂಲ ದಾಖಲೆಗಳು ಹಾಗೂ ಜೆರಾಕ್ಸ್ ಪ್ರತಿಯನ್ನು ಹಾಜರುಪಡಿಸಿ ವಿಕಲಚೇತನರ ಹೊಸ, ನವೀಕರಣ ಪಾಸ್ ಗಳನ್ನು ಪಡೆದುಕೊಳ್ಳಬೇಕೆಂದು ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *