ಸಾರಿಗೆ ನೌಕರರು ಮುಷ್ಕರ ಕೈ ಬಿಟ್ಟು ಕೆಲಸ ಶುರು ಮಾಡಿ: ಲಕ್ಚ್ಮಣ ಸವದಿ ಮನವಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸುತ್ತಿರುವ ನಡೆಸುತ್ತಿರುವ ಮುಷ್ಕರ ಕೈಬಿಡಿ. ನಿಮ್ಮ ಯೂನಿಯನ್​ ಲೀಡರ್​ಗಳ ಮೇಲೆ ನಂಬಿಕೆ ಇಟ್ಟು, ಮುಷ್ಕರದಿಂದ ಹಿಂದೆ ಸರಿಯಬೇಕು ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ  ಮನವಿ ಮಾಡಿದ್ದಾರೆ.

ಸಾರಿಗೆ ಇಲಾಖೆ ನೌಕರರು ಅವರ ಯೂನಿಯನ್  ನಾಯಕರಲ್ಲಿ ನಂಬಿಕೆ ಇರಿಸಿಕೊಳ್ಳಬೇಕು. ಅವರ ಜತೆಗೆ ಮಾತುಕತೆ ನಡೆಸುತ್ತಿದ್ದೇವೆ. ನಿಮ್ಮ ಹಿತವನ್ನು ಕಾಯುತ್ತೇವೆ. ಕರೊನಾ ಇದ್ದಾಗಲೂ ಎಲ್ಲರಿಗೂ ವೇತನ ಕೊಟ್ಟಿದ್ದೇವೆ. ವೇತನ ತಡೆ ಹಿಡಿದಿಲ್ಲ. ಜನರಿಗೆ ತೊಂದರೆ ಕೊಡಬೇಡಿ. ಲೀಡರ್​ಗಳ ಮಾತಿಗೆ ಬೆಲೆ ಕೊಟ್ಟು ಮುಷ್ಕರ ಹಿಂಪಡೆಯಬೇಕು. ಸದ್ಯಕ್ಕೆ ಎಸ್ಮಾ ಜಾರಿಗೊಳಿಸುವುದಿಲ್ಲ. ನೌಕರರ ಮೇಲೆ ನಂಬಿಕೆ, ಭರವಸೆ ಇದೆ. ಮುಷ್ಕರ ಕೈಬಿಟ್ಟು ಕೆಲಸ ಶುರುಮಾಡಿ ಎಂದರು.

ಸಾರಿಗೆ ನೌಕರರ ಮುಷ್ಕರ ತೀವ್ರಗೊಂಡ ಕೂಡಲೇ ಯೂನಿಯನ್ ಲೀಡರ್​ಗಳನ್ನು ತಮ್ಮ ನಿವಾಸಕ್ಕೇ ಕರೆಯಿಸಿಕೊಂಡ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಹವಾಲುಗಳನ್ನು ಆಲಸಿ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಸಾರಿಗೆ ನೌಕರರು ಮುಷ್ಕರ ಬಿಟ್ಟು ಕೆಲಸ ಆರಂಭಿಸಬೇಕು. ಎಲ್ಲೆಲ್ಲಿ ಬಸ್ ಸಂಚಾರ ಇದೆ ಎಂಬುದನ್ನು ತಿಳಿದುಕೊಂಡಿದ್ದೇನೆ. ಯೂನಿಯನ್ ಲೀಡರ್​ಗಳ ಜತೆಗೆ ಇನ್ನೂ ಒಂದು ಸುತ್ತಿನ ಸಭೆ ನಡೆಸುತ್ತೇವೆ ಎಂದು ತಿಳಿಸಿದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *