Connect with us

Dvgsuddi Kannada | online news portal | Kannada news online

ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆ ಇಲ್ಲ; ಕೆಎಸ್ ಆರ್ ಟಿ ಸಿ ಎಂಡಿ ಶಿವಯೋಗಿ ಕಳಸದ

ಪ್ರಮುಖ ಸುದ್ದಿ

ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆ ಇಲ್ಲ; ಕೆಎಸ್ ಆರ್ ಟಿ ಸಿ ಎಂಡಿ ಶಿವಯೋಗಿ ಕಳಸದ

ಬೆಂಗಳೂರು : ಆರನೆ ವೇತನ ಆಯೋಗ ಜಾರಿಗೆ ಆಗ್ರಹಿಸಿ  ಸಾರಿಗೆ ನೌಕರರು ಸರ್ಕಾರದ ವಿರುದ್ಧಕ್ಕೆ ಇಳಿದಿದ್ದಾರೆ. ಈ ಮಧ್ಯೆ ಮುಷ್ಕರ ನಿರತರ ಮಾರ್ಚ್ ತಿಂಗಳ ವೇತನ ತಡೆ ಹಿಡಿಯಲು ನಿರ್ಧರಿಸಲಾಗಿದೆ ಎಂದು ಸುದ್ದಿ ಕೇಳಿ ಬಂದಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ ಕೆಎಸ್‌ಆರ್ ಟಿ ಸಿ ಎಂಡಿ ಶಿವಯೋಗಿ ಕಳಸದ, ಮಾರ್ಚ್ ತಿಂಗಳ ಸಂಬಂಳಕ್ಕೆ ತಡೆ ಇಲ್ಲ, ಸ್ವಲ್ಪ ವಿಳಂಬವಾಗಿ ಆಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಹಣಕಾಸು ವರ್ಷದ ಅಂತ್ಯವಾಗಿದ್ದು, ಇದರಿಂದಾಗಿ ಸಾರಿಗೆ ನೌಕರರ ಸಂಬಂಳ ವಿಳಂಬವಾಗಲಿದೆ. ಮುಷ್ಕರ ನಡೆಸುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಮಾರ್ಚ್ ತಿಂಗಳ ವೇತನಕ್ಕೆ ತಡೆ ನೀಡಿಲ್ಲ ಎಂದರು.

ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ವೇತನ ಜಾರಿಗೆ ತರಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಈಗಾಗಲೇ ಸ್ಪಷ್ಟ ಪಡಿಸಿದೆ. ಮುಷ್ಕರ ನಿರತರಿಗೆ ರಾಜ್ಯದ  ಆರ್ಥಿಕ ಪರಿಸ್ಥಿತಿಯ  ತಿಳಿ ಹೇಳಲಾಗುವುದು ಎಂದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top