ಬೆಂಗಳೂರು : ಆರನೆ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಸರ್ಕಾರದ ವಿರುದ್ಧಕ್ಕೆ ಇಳಿದಿದ್ದಾರೆ. ಈ ಮಧ್ಯೆ ಮುಷ್ಕರ ನಿರತರ ಮಾರ್ಚ್ ತಿಂಗಳ ವೇತನ ತಡೆ ಹಿಡಿಯಲು ನಿರ್ಧರಿಸಲಾಗಿದೆ ಎಂದು ಸುದ್ದಿ ಕೇಳಿ ಬಂದಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ ಕೆಎಸ್ಆರ್ ಟಿ ಸಿ ಎಂಡಿ ಶಿವಯೋಗಿ ಕಳಸದ, ಮಾರ್ಚ್ ತಿಂಗಳ ಸಂಬಂಳಕ್ಕೆ ತಡೆ ಇಲ್ಲ, ಸ್ವಲ್ಪ ವಿಳಂಬವಾಗಿ ಆಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಹಣಕಾಸು ವರ್ಷದ ಅಂತ್ಯವಾಗಿದ್ದು, ಇದರಿಂದಾಗಿ ಸಾರಿಗೆ ನೌಕರರ ಸಂಬಂಳ ವಿಳಂಬವಾಗಲಿದೆ. ಮುಷ್ಕರ ನಡೆಸುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಮಾರ್ಚ್ ತಿಂಗಳ ವೇತನಕ್ಕೆ ತಡೆ ನೀಡಿಲ್ಲ ಎಂದರು.
ಸಾರಿಗೆ ನೌಕರರಿಗೆ 6ನೇ ವೇತನ ಆಯೋಗದ ವೇತನ ಜಾರಿಗೆ ತರಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಈಗಾಗಲೇ ಸ್ಪಷ್ಟ ಪಡಿಸಿದೆ. ಮುಷ್ಕರ ನಿರತರಿಗೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ತಿಳಿ ಹೇಳಲಾಗುವುದು ಎಂದರು.



