Connect with us

Dvgsuddi Kannada | online news portal | Kannada news online

ನಾಳೆಯೂ ಬಸ್ ರಸ್ತೆಗೆ ಇಳಿಯಲ್ಲ; 9 ಬೇಡಿಕೆ ಈಡೇರವರೆಗೂ ಮುಷ್ಕರ ಕೈಬಿಡಲ್ಲ: ಕೋಡಿಹಳ್ಳಿ ಚಂದ್ರಶೇಖರ್

ಪ್ರಮುಖ ಸುದ್ದಿ

ನಾಳೆಯೂ ಬಸ್ ರಸ್ತೆಗೆ ಇಳಿಯಲ್ಲ; 9 ಬೇಡಿಕೆ ಈಡೇರವರೆಗೂ ಮುಷ್ಕರ ಕೈಬಿಡಲ್ಲ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ನಾಳೆಯೂ ಕೂಡ ಬಸ್ ಗಳು ರಸ್ತೆ ಇಳಿಯಲ್ಲ. ಸಾರಿಗೆ ನೌರರ 9 ಬೇಡಿಕೆ ಈಡೇರಿಸುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಸಾರಿಗೆ ನೌಕರರ ಒಕ್ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರ 9 ಬೇಡಿಕೆಯನ್ನು ಸರ್ಕಾರದ ಮುಂದೆ ಇಟ್ಟಿದ್ದೇವೆ. ಆದರೆ ನಮ್ಮ 9 ಬೇಡಿಕೆಯಲ್ಲಿ 8 ಈಡೇರಿಸಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ಆ ಬೇಡಿಕೆ ಬಗ್ಗೆ ನಮಗೆ ತೃಪ್ತಿ ಇಲ್ಲ. ಹೀಗಾಗಿ 6ನೇ ವೇತನ ಆಯೋಗದ ಅನ್ವಯ ವೇತನ ನೀಡಬೇಕು. ರಾಜ್ಯ 72 ನಿಗಮದ ಸಿಬ್ಬಂದಿಗೆ ಎಷ್ಟು ವೇತನ ನೀಡಲಾಗುತ್ತಿದೆ. ಸಾರಿಗೆ ನೌಕರಿಗೆ ಎಷ್ಟು ವೇತರನ  ನೀಡಲಾಗುತ್ತಿದೆ ಎಂಬುದನ್ನು ಸರ್ಕಾರ ಪರಿಶೀಲನೆ ಮಾಡಲಿ ಎಂದರು.

ಸಿಎಂ ಯಡಿಯೂರಪ್ಪ ಅವರು ವಿರೋಧ ಪಕ್ಷದಲ್ಲಿ ಇದ್ದಾಗ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ.  ಈಗ ಆಡಳಿತ ಪಕ್ಷದಲ್ಲಿ ಇದ್ದೀರಿ. ನಮ್ಮ ಬೇಡಿಕೆ ಈಡೇರಿಸಿ.  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವೇತನ ತಾರತಮ್ಯ ನೀತಿ ಸರಿಯಲ್ಲ ಎಂದರು.

ಕೆಲಸ ಮಾಡುವವರಿಗೆ ಸರಿಯಾದ ಕೆಲಸ, ವೇತನ ನೀಡುತ್ತಿಲ್ಲ. ಈಗ  ನಿವೃತ್ತಿ ನೌಕರರನನ್ನು ಕರೆಸಿ ಕೆಲಸ ಮಾಡಿಸುತ್ತೇವೆ ಎಂದು ಹೇಳುತ್ತಿದ್ದೀರಿ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top