ಕೆಎಸ್ ಆರ್ ಟಿಸಿ ಬಸ್ ಗಳ ಆಯುಧ ಪೂಜೆಗೆ ಇಲಾಖೆ ಕೊಟ್ಟಿದ್ದು ಬರೀ 100, ಕಾರಿಗೆ 40 ರೂಪಾಯಿ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ನಾಡಿನೆಲ್ಲಡೆ ಸಂಭ್ರಮದ ದಸರಾ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಕಚೇರಿಗಳಲ್ಲಿ, ಮನೆಗಳಲ್ಲಿ, ವಾಹನಗಳಿಗೆ ಆಯುಧ ಪೂಜಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ,   ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ksrtc) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (bmtc) ಆಯುಧ ಪೂಜೆಗೆ ಒಂದು ವಾಹನಕ್ಕೆ ಕೇವಲ 100 ರೂಪಾಯಿ, ಇಲಾಖೆಗೆ ಕಾರಿನ ಪೂಜೆಗೆ 40 ಕೊಟ್ಟಿದೆ. ಇದು ನೌಕರರನ್ನು ಚಿಂತೆಗೆ ಕಾರಣವಾಗಿದ್ದು, 100 ರೂ.ನಲ್ಲಿ ಬಸ್ ಪೂಜೆ ಮಾಡುವುದು ಹೇಗೆ ಎನ್ನುವಂತಾಗಿದೆ.

ಸಾರಿಗೆ ಆಡಳಿತವು ಒಂದು ಬಸ್ಸಿಗೆ 100 ರೂಪಾಯಿಗಳನ್ನು ಮಾತ್ರ ಆಯುಧ ಪೂಜೆಗಾಗಿ ನೀಡಿದ್ದು, ಚಾಲಕ ಮತ್ತು ನಿರ್ವಾಹಕರು ಪೇಚಿಗೆ ಸಿಲುಕುವಂತೆ ಮಾಡಿದ್ದಾರೆ. ಈಗಾಲೇ  ಬೆಲೆ ಏರಿಕೆಯಿದ ಸಂಕಷ್ಟ ಅನುಭವಿಸುತ್ತಿದ್ದು, ಅದರಲ್ಲೂ ಹಬ್ಬದ ದಿನಗಳಲ್ಲಿ ಹೂವು, ಹಣ್ಣುಗಳ ಬೆಲೆ ದುಪ್ಪಟ್ಟು ದರವಿದೆ. ಅಂತಹದರಲ್ಲಿ ಒಂದು ಬಸ್‌ಗೆ ಕೇವಲ 100 ರೂ. ನೀಡಿ ಪೂಜೆ ಮಾಡೋದು ಹೇಗೆ..? ಸಾರಿಗೆ ಇಲಾಖೆ ಕೊಟ್ಟ ಹಣಕ್ಕೆ ಅಚ್ಚರಿಕೊಂಡ  ಸಿಬ್ಬಂದಿ,  100 ರೂ.ಗಳಿಗೆ ಒಂದು ಮಾರು ಹೂವು ಕೂಡ ಬರುವುದಿಲ್ಲ, ಇನ್ನು ನಾವು ಹಣ ಹಾಕಿ ಪೂಜೆ ಮಾಡೋಕೆ  ಸರಿಯಾಗಿ ಸಂಬಳವಿಲ್ಲ ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *