ಬೆಂಗಳೂರು : ಆರನೇ ವೇತನ ಆಯೋಗದ ವರದಿ ಅನ್ವಯ ಸಾರಿಗೆ ನೌಕರರು ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರ ನಡೆಯುತ್ತಿದ್ದು, ಇಂದು ಸಾರಿಗೆ ನೌಕರರ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇಂತಹ ನೌಕರರ ಬೇಡಿಕೆ ಈಡೇರಿಸುವ ಬದಲು ಸರ್ಕಾರ ನೌಕರಿಗೆ ವರ್ಗಾವಣೆ ಭಾಗ್ಯ ಕಲ್ಪಸಿದದ್ದು, ಮುಷ್ಕರ ನಿರತ ಸಾರಿಗೆ ಸಿಬ್ಬಂದಿಗಳನ್ನು ವಿವಿಧ ವಿಭಾಗಕ್ಕೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 244 ಚಾಲಕರು ಮತ್ತು ನಿರ್ವಾಹಕರು, 5 ಜನ ಸಂಚಾರ ಮೇಲ್ವಿಚಾರಕ ಸಿಬ್ಬಂದಿಗಳು, 34 ತಾಂತ್ರಿಕ ಸಿಬ್ಬಂದಿಗಳನ್ನು ಹಾಗೂ 9 ಮಂದಿ ಇತರ ಸಿಬ್ಬಂದಿಗಳನ್ನು ಬೇರೆ ಬೇರೆ ವಿಭಾಗಳಿಗೆ ವರ್ಗಾಯಿಸಿ ಆದೇಶಿಸಿದೆ.
ನೌಕರನ್ನು ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ಪ್ರಚೋದಿಸಿ, ಕರ್ತವ್ಯಕ್ಕೆ ಹಾಜರಾಗದಂತೆ ಸಿಬ್ಬಂದಿಗಳಿಗೆ ಬೆದರಿಕೆ ಹಾಕಿ, ನಿಗಮದ ಬಸ್ ಕಾರ್ಯಾಚರಣೆಗೆ ಅಡ್ಡಿಪಡಿಸಿ ಸಾರ್ವಜನಿಕ ಪ್ರಯಾಣಿಕರಿಗೆ ತೊಂದರೆ ಉಂಟು ಮಾಡಲಾಗುತ್ತಿದೆ. ಇಂತಹ ನೌಕರಿಗೆ ಸರ್ಕಾರ ವರ್ಗಾವಣೆ ಭಾಗ್ಯ ಕಲ್ಪಿಸಿದೆ.
— KSRTC (@KSRTC_Journeys) April 9, 2021



