Connect with us

Dvgsuddi Kannada | online news portal | Kannada news online

ಡಿ.16ರವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

rain22

ಪ್ರಮುಖ ಸುದ್ದಿ

ಡಿ.16ರವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಮಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಚಳಿ ಗಾಳಿ ಸಹಿತ ಅಕಾಲಿಕ ಮಳೆಯಾಗುತ್ತಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಡಿ. 16ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮಾಹಿತಿ ನೀಡಿದೆ.

ಮಾಂಡೌಸ್ ಚಂಡಮಾರುತ ದುರ್ಬಲವಾಗಿದ್ದರೂ ಚಾಮರಾಜನಗರ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ IMD ಹಳದಿ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು,ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ಗದಗ ಮತ್ತು ಬಳ್ಳಾರಿಯಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಚಾಮರಾಜನಗರದಲ್ಲಿ 69 ಮಿಲಿ ಮೀಟರ್‌, ಶಿವಮೊಗ್ಗದಲ್ಲಿ 57.5 ಮಿಲಿ ಮೀಟರ್‌, ಚಿಕ್ಕಮಗಳೂರಿನಲ್ಲಿ 53 ಮಿಲಿ ಮೀಟರ್‌, ತುಮಕೂರು- 48.5 ಮಿಲಿ ಮೀಟರ್‌, ಮಂಡ್ಯ – 46 ಮಿಲಿ ಮೀಟರ್‌, ಮೈಸೂರು- 44.5 ಮಿಲಿ ಮೀಟರ್, ದಾವಣಗೆರೆ- 42.5 ಮಿಲಿ ಮೀಟರ್‌, ಹಾಸನ- 39ಮಿಲಿ ಮೀಟರ್‌, ಕೋಲಾರ- 33 ಮಿಲಿ ಮೀಟರ್, ಬಳ್ಳಾರಿ- 31 ಮಿಲಿ ಮೀಟರ್‌ ಹಾಗೂ ಬೆಂಗಳೂರು ನಗರದಲ್ಲಿ 31 ಮಿಲಿ ಮೀಟರ್‌ ಮಳೆ ಆಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top