ಮುಂಗಾರು ಮಳೆ ಪ್ರವೇಶಕ್ಕೆ ಸಮುದ್ರದಲ್ಲಿ ಪೂರಕ ವಾತಾವರಣವಿಲ್ಲ; ರಾಜ್ಯ ಪ್ರವೇಶ ಇನ್ನಷ್ಟು ವಿಳಂಬ…!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಈ ಬಾರಿಯ ಮುಂಗಾರು ಮಳೆ ಆಗಮನಕ್ಕೆ ಸಮುದ್ರದಲ್ಲಿ ಪೂರಕ ವಾತಾವರಣ ನಿರ್ಮಾಣವಾಗಿಲ್ಲ. ಹೀಗಾಗಿ ಈ ಬಾರಿ ಮುಂಗಾರು ಇನ್ನಷ್ಟು ವಿಳಂಬವಾಗಲಿದೆ. ಈ ಬಾರಿಯ ಹಿಂಗಾರು ಮಳೆಯೂ ನಿರೀಕ್ಷಿತ ಪ್ರಮಾಣದಲ್ಲಿ ಬಿದ್ದಿಲ್ಲ. ಇದರಿಂದ ಬಿಸಿಲ ಝಳ ಹೆಚ್ಚಾಗಿದೆ.

ಭಾರತೀಯ ಹವಾಮಾನ ಇಲಾಖೆ ಈ ಬಾರಿ ಜೂ. 4ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶಿಸಲಿವೆ ಎಂದು ತಿಳಿಸಿತ್ತು. ಆದರೆ ಸದ್ಯದ ಪರಿಸ್ಥಿತಿ ಪ್ರಕಾರ ಮತ್ತೂ 4-5 ದಿನ ತಡವಾಗುವ ಸಾಧ್ಯತೆ ಇದೆ. ಬಹುತೇಕ ನಾಲ್ಕು ವರ್ಷದ ಬಳಿಕ ಮುಂಗಾರು ಆಗಮನ ಮತ್ತೆ ವಿಳಂಬವಾಗುತ್ತಿದೆ.

2019ರಲ್ಲಿ ಒಂದು ವಾರ ತಡವಾಗಿತ್ತು. ಜೂ. 8ರಂದು ಮುಂಗಾರು ಮಾರುತ ಕೇರಳ ಕರಾವಳಿ ಪ್ರವೇಶಿಸಿತ್ತು. ಇದರಿಂದಾಗಿ ದೇಶದ ವಿವಿಧೆಡೆಯೂ ಮಳೆ ವಿಳಂಬವಾಗಿತ್ತು. ಕೇರಳ ಪ್ರವೇಶಿಸುವ ಮುಂಗಾರು ಸಾಮಾನ್ಯವಾಗಿ ಒಂದು ಆಥವಾ ಎರಡು ದಿನದಲ್ಲಿ ರಾಜ್ಯ ಕರಾವಳಿಗೆ ತಲುಪುವುದು ವಾಡಿಕೆ. ಆದರೆ ಕೇರಳಕ್ಕೆ ಪ್ರವೇಶಿಸುತ್ತಿದ್ದಂತೆ ಅರಬಿ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾಗಿ ಕರಾವಳಿ ಕರ್ನಾಟಕಕ್ಕೆ ಪ್ರವೇಶಿಸಬೇಕಿದ್ದ ಮುಂಗಾರಿಗೆ ತಡೆಯಾಗಿ 2019 ರಲ್ಲಿ ಆರು ದಿನ ವಿಳಂಬವಾಗಿ ಜೂ. 14ರಂದು ಕರಾವಳಿಗೆ ಪ್ರವೇಶ ಮಾಡಿತ್ತು.

ಗಾಳಿ ಬೀಸುವಿಕೆ, ಗಾಳಿಯ ಚಲನೆ, ಕಡಲಿನಲ್ಲಿ ಅಬ್ಬರ ಹೆಚ್ಚಾಗುವುದು ಮತ್ತು 48 ಗಂಟೆಗಳ ನಿರಂತರ ಮಳೆ ಸುರಿಯುವಿಕೆ ಮೊದಲಾದ ಲಕ್ಷಣಗಳನ್ನು ಅವಲೋಕಿಸಿ ಹವಾಮಾನ ಇಲಾಖೆ ಮುಂಗಾರಿನ ಆಗಮನ ಲೆಕ್ಕಚಾರ ಹಾಕಲಾಗುತ್ತಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *