Connect with us

Dvgsuddi Kannada | online news portal | Kannada news online

ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ರಚನೆ: ಸಚಿವ ಕೆ.ಎಸ್.ಈಶ್ವರಪ್ಪ

ಪ್ರಮುಖ ಸುದ್ದಿ

ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ರಚನೆ: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ:  ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಾರ್ಯಪಡೆ ರಚಿಸಲಾಗಿದ್ದು, ಈ  ಕಾರ್ಯಪಡೆ ಕೊರೊನಾ  ಹರಡದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದ ಈ ಕಾರ್ಯಪಡೆಯಲ್ಲಿ ಪಿಡಿಒ ಸದಸ್ಯ ಕಾರ್ಯದರ್ಶಿಯಾಗಿದ್ದು, ಪೊಲೀಸ್ ಇಲಾಖೆ, ಶಿಕ್ಷಣ, ಕಂದಾಯ, ಆರೋಗ್ಯ ಇಲಾಖೆ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಮತ್ತು ಸ್ವಸಹಾಯ ಗುಂಪುಗಳ ಪ್ರತಿನಿಧಿಗಳು ಇದ್ದಾರೆ. ಹೊಂ ಕ್ವಾರೆಂಟೈನ್ ಬಗ್ಗೆ ನಿಗಾ ವಹಿಸಲು ರಚಿಸಲಾಗಿದ್ದ ಗ್ರಾಮ ಪಂಚಾಯತ್ ಹೆಲ್ಪ್ ಡೆಸ್ಕ್‍ಗಳು ಇನ್ನು ಮುಂದೆ ಸಮುದಾಯ ಸಹಾಯವಾಣಿಗಳಾಗಿ ಕಾರ್ಯ ನಿರ್ವಹಿಸಲಿವೆ ಎಂದರು.

ಗ್ರಾಮಾಂತರ ಪ್ರದೇಶಗಳಿಗೆ ಹಿಂತಿರುವ ವಲಸೆ ಕಾರ್ಮಿಕರಿಗೆ ಮತ್ತಿತರರಿಗೆ ನರೇಗಾ ಅಡಿಯಲ್ಲಿ ಉದ್ಯೋಗ ಒದಗಿಸುವುದು, ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೋವಿಡ್ ತಡೆಗಟ್ಟಲು ಕಾರ್ಯನಿರ್ವಹಿಸುವ ಸ್ವಯಂ ಸೇವಕರನ್ನು ಗುರುತಿಸಿ, ಪಾಳಿ ವ್ಯವಸ್ಥೆಯಲ್ಲಿ ಅವರ ಸೇವೆ ಪಡೆಯುವುದು, ಸಮುದಾಯ ಸಹಾಯವಾಣಿ ಆರಂಭಿಸುವುದು. ಅವಶ್ಯ ಮಾಸ್ಕ್, ಸಾಬೂನು ಮತ್ತು ಸ್ಯಾನಿಟೈಸರ್, ಸ್ವಚ್ಛತಾ ಪರಿಕರಗಳನ್ನು ಖರೀದಿಸಲು ಗ್ರಾಮ ಪಂಚಾಯತ್‍ಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಅನುದಾನ ಮಂಜೂರು: ನರೇಗಾ ಯೋಜನೆಯಡಿ ಕಳೆದ ಸಾಲಿನಲ್ಲಿ ಬಾಕಿ ಇದ್ದ 89 ಕೋಟಿ ರೂ ಮತ್ತು ಪ್ರಸ್ತುತ ಸಾಲಿನ 284ಕೋಟಿ ರೂ. ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದರಲ್ಲಿ 77ಕೋಟಿ ರೂ. ಕೂಲಿ ಮೊತ್ತವನ್ನು ಫಲಾನುಭವಿಗಳಿಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top