ಜೂ.1ರಿಂದ ಮತ್ತೆ ಮಳೆಯ ಅಬ್ಬರ; ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಒಂದು ವಾರದ ಅಬ್ಬರ ನಂತರ ಕಳೆದ ಎರಡು ದಿನದಿಂದ ಬಿಡುವು ನೀಡಿದೆ. ಮತ್ತೆ ಜೂ.1ರಿಂದ ಮಳೆ ಶುರುವಾರಲಿದೆ‌. ಮುಂಗಾರು ಮಳೆ ಆಗಮನಕ್ಕೆ ದಿನಗಣನೆ ಶುರುವಾಗಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ವು ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂ.1ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಕ್ಕೆ ಸೇರಿದ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿಗಿಂತ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ. ಈ ಅವಧಿಯಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಕೆಲವೆಡೆ ಮಾತ್ರ ಹಗುರದಿಂದ ಕೂಡಿದ ಮಳೆಯಾಗಬಹುದು. ವಾರಾಂತ್ಯ ಬಳಿಕ ಎಂದಿನಂತೆ ಮುಂಗಾರು ಮಳೆ ಆರಂಭವಾಗಲಿದೆ.

ಮೇ 31ರಂದೇ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾ ನಿರ್ದೇಶಕ ಡಾ|ಮೃತ್ಯುಂಜಯ ಮಹೋಪಾತ್ರ ಹೇಳಿದ್ದಾರೆ. ವಾಯವ್ಯದಲ್ಲಿ ಸಾಮಾನ್ಯ ಮಳೆಯಾದರೆ, ಮಧ್ಯಭಾರತ ಹಾಗೂ ದಕ್ಷಿಣದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಬಹುದು ಎಂದು ಹೇಳಿದ್ದಾರೆ.

ದೇಶದಾದ್ಯಂತ ನೈಋತ್ಯ ಮುಂಗಾರು ಮಳೆಯು ಒಟ್ಟು ಸರಾಸರಿಯ ಶೇಕಡಾ 106 ರಷ್ಟು ವಾಡಿಕೆ ಮಳೆ ಆಗಬೇಕು. ಈ ಭಾಗಿ ಅದಕ್ಕಿಂತಲೂ ಹೆಚ್ಚಿನ ಮಳೆ ಸ್ವೀಕರಿಲಿದ್ದೇವೆ. ಜೂನ್ 1ರಿಂದ ಮುಂಗಾರು ಮಳೆ ಆರಂಭವಾಗಲಿದೆ. ಮೇ 30ರ ನಂತರ ದೇಶದಲ್ಲಿನ ಶಾಖದ ಅಲೆ ಅಂತ್ಯವಾಗಲಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *