ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಒಂದು ವಾರದ ಅಬ್ಬರ ನಂತರ ಕಳೆದ ಎರಡು ದಿನದಿಂದ ಬಿಡುವು ನೀಡಿದೆ. ಮತ್ತೆ ಜೂ.1ರಿಂದ ಮಳೆ ಶುರುವಾರಲಿದೆ. ಮುಂಗಾರು ಮಳೆ ಆಗಮನಕ್ಕೆ ದಿನಗಣನೆ ಶುರುವಾಗಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ವು ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂ.1ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಕ್ಕೆ ಸೇರಿದ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿಗಿಂತ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ. ಈ ಅವಧಿಯಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಕೆಲವೆಡೆ ಮಾತ್ರ ಹಗುರದಿಂದ ಕೂಡಿದ ಮಳೆಯಾಗಬಹುದು. ವಾರಾಂತ್ಯ ಬಳಿಕ ಎಂದಿನಂತೆ ಮುಂಗಾರು ಮಳೆ ಆರಂಭವಾಗಲಿದೆ.
ಮೇ 31ರಂದೇ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾ ನಿರ್ದೇಶಕ ಡಾ|ಮೃತ್ಯುಂಜಯ ಮಹೋಪಾತ್ರ ಹೇಳಿದ್ದಾರೆ. ವಾಯವ್ಯದಲ್ಲಿ ಸಾಮಾನ್ಯ ಮಳೆಯಾದರೆ, ಮಧ್ಯಭಾರತ ಹಾಗೂ ದಕ್ಷಿಣದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಬಹುದು ಎಂದು ಹೇಳಿದ್ದಾರೆ.
ದೇಶದಾದ್ಯಂತ ನೈಋತ್ಯ ಮುಂಗಾರು ಮಳೆಯು ಒಟ್ಟು ಸರಾಸರಿಯ ಶೇಕಡಾ 106 ರಷ್ಟು ವಾಡಿಕೆ ಮಳೆ ಆಗಬೇಕು. ಈ ಭಾಗಿ ಅದಕ್ಕಿಂತಲೂ ಹೆಚ್ಚಿನ ಮಳೆ ಸ್ವೀಕರಿಲಿದ್ದೇವೆ. ಜೂನ್ 1ರಿಂದ ಮುಂಗಾರು ಮಳೆ ಆರಂಭವಾಗಲಿದೆ. ಮೇ 30ರ ನಂತರ ದೇಶದಲ್ಲಿನ ಶಾಖದ ಅಲೆ ಅಂತ್ಯವಾಗಲಿದೆ.



