Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ನಾಲ್ಕೈದು ದಿನ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ನಾಲ್ಕೈದು ದಿನ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಈಗಾಗಲೇ ಕೇರಳ ರಾಜ್ಯ ಪ್ರವೇಶಿಸಿರುವ ಮುಂಗಾರು ಮಳೆ (Monsoon Rain), ಇಂದಿನಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಪ್ರವೇಶ ಪಡೆಯಲಿದೆ. ಈ ಮೂಲಕ ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ಚುರುಕು ಪಡೆದುಕೊಳ್ಳಲಿದ್ದು, ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಉತ್ತರ ಒಳನಾಡಿನಲ್ಲೂ ಜೂನ್ 4 – 5 ರಿಂದ ಭಾರೀ ಮಳೆ ಸಾಧ್ಯತೆ ಇದ್ದು, ಜೂನ್ 7 ರಂದು ಇಡೀ ರಾಜ್ಯಾದ್ಯಂತ ಮುಂಗಾರು ಮಳೆ ವ್ಯಾಪಿಸಲಿದೆ. ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ 30-40 ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.

ನೈಋತ್ಯ ಮಾನ್ಸೂನ್ ಹಿನ್ನೆಲೆ ಇವತ್ತು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಯಚೂರು, ಕೊಪ್ಪಳ ಮಂಡ್ಯ, ಮೈಸೂರು ಸೇರಿದಂತೆ ಗುಡುಗು ಸಹಿತ ಭಾರೀ ಮಳೆ ಮೂನ್ಸುಚನೆ ನೀಡಲಾಗಿದೆ. 40-50 ಕಿಮೀ ವೇಗದ ಗಾಳಿಯೊಂದಿಗೆ ಮಳೆ ಸಾಧ್ಯತೆ ಇದೆ.

ಮುಂಗಾರು ಆಗಮನದ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದಿನಿಂದ ಮುಂದಿನ ನಾಲ್ಕು ದಿನ ಮುಂಗಾರು ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top