ಬೆಂಗಳೂರು: ರಾಜ್ಯದಲ್ಲಿ (Karnataka) ನೈರುತ್ಯ ಮುಂಗಾರು (monsoon rain) ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಮಲೆನಾಡು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ.
ಭಾನುವಾರದವರೆಗೂ ಜೋರು ಮಳೆ ಮುನ್ಸೂಚನೆ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲೈ ಸುಳಿಗಾಳಿ ಹಾಗೂ ಒಳನಾಡಿನಲ್ಲಿರುವ ಟ್ರಪ್ನ ಪ್ರಭಾವದಿಂದ ಮೋಡ ಕವಿದ ವಾತಾವರಣ ಉಂಟಾಗಿ ಸಂಜೆ ,ರಾತ್ರಿ ವೇಳೆ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿನಲ್ಲಿ ಭಾರೀ ಪ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಮುಂದಿನ ಭಾನುವಾರದವರೆಗೂ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಗಳಿವೆ.
ರೈತರರಲ್ಲಿ ಸಂತಸ
ಕಳೆದ 8 ದಿನದಿಂದ ಮಂಕಾಗಿದ್ದ ಮುಂಗಾರು,
ಇಂದಿನಿಂದ (ಜೂ.10) ರಾಜ್ಯದೆಲ್ಲಡೆ ಮತ್ತಷ್ಟು ಚುರುಕು ಪಡೆದುಕೊಂಡಿದೆ. ದಿನದಿಂದ ದಿನಕ್ಕೆ ಮಳೆ ಪ್ರಮಾಣ ಹೆಚ್ಚಾಗುತ್ತಿದೆ. ನಿನ್ನೆ ( ಜೂ.9) ಉಡುಪಿ,ಬೀದರ್, ದಾವಣಗೆರೆ, ಕಲಬುರಗಿ, ದಕ್ಷಿಣ ಕನ್ನಡ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಮಳೆಯಾಗಿದೆ. ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ದುರ್ಬಲಗೊಂಡಿದ್ದರಿಂದ ಆತಂಕಗೊಂಡಿದ್ದರು. ಇದೀಗ ಮುಂಗಾರು ಚುರುಕು ಪಡೆದಿದ್ದರಿಂದ ರೈತರರಲ್ಲಿ ಸಂತಸ ಮೂಡಿದೆ.
ಎಲ್ಲೆಲ್ಲಿ ಮಳೆ...?
ಇಂದಿನಿಂದ (ಜೂ.10) ತುಮಕೂರು, ಮಂಡ್ಯ, ರಾಮನಗರ, ಗದಗ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಧಾರವಾಡ ಬೆಳಗಾವಿ, ಶಿವಮೊಗ್ಗ, ರಾಯಚೂರು, ಹಾವೇರಿ, ವಿಜಯನಗರ, ಕೋಲಾರ, ವಿಜಯಪುರ, ಕೊಡಗು, ಯಾದಗಿರಿ, ಮೈಸೂರು, ಬಾಗಲಕೋಟೆ, ಬಳ್ಳಾರಿ, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಹಾಸನ ಜಿಲ್ಲೆಗಳ ಮಳೆ ಸಾದ್ಯತೆ ಇದೆ.



