ಬೆಂಗಳೂರು: ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಕ್ಯಾತೆ ವಿಚಾರವಾಗಿ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಸಂಸದ ಅಂನಂತ್ ಕುಮಾರ್ ಹೆಗಡೆ ನೋ ಕಮೆಂಟ್ಸ್ ಎಂದು ಮಾತನಾಡದೇ ತೆರಳಿದ್ದಾರೆ.
ಬೆಳಗಾವಿ ಸೇರಿದಂತೆ ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಎಂದು ಹೇಳುವ ಮೂಲಕ ಗಡಿ ವಿಚಾರವಾಗಿ ಮತ್ತೆ ಕ್ಯಾತೆ ತೆಗೆದಿರುವ ಉದ್ಧವ್ ಠಾಕ್ರೆ ಹೇಳಿಕೆಗೆ ರಾಜ್ಯಾದ್ಯಂತ ಪ್ರತಿಭಟನೆ ವ್ಯಕ್ತವಾಗಿದೆ. ಆದರೆ, ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗಡೆ ಮಾತ್ರ ಪ್ರತಿಕ್ರಿಯೆಗೆ ನಿರಾಕರಿಸಿರುವುದು ಅಚ್ಚರಿ ಮೂಡಿಸಿದ್ದಾರೆ.
ಬೆಳಗಾವಿ ವಿಚಾರವಾಗಿ ಮಾಧ್ಯವದವರ ಪ್ರಶ್ನೆಗೆ ನೋ ಕಮೆಂಟ್ಸ್ʼ ಎಂದಿರುವ ಅನಂತ್ ಕುಮಾರ್, ಕಾರವಾರ ಗಡಿ ವಿಚಾರವಾಗಿಯೂ ಮಹಾರಾಷ್ಟ್ರ ಸಚಿವರ ಕ್ಯಾತೆಗೂ ನೋ ಕಮೆಂಟ್ಸ್.ಎಲ್ಲರಿಗೂ ಧನ್ಯವಾದ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿ ಮುಂದೆ ಸಾಗಿದ್ದಾರೆ.



