Connect with us

Dvgsuddi Kannada | online news portal | Kannada news online

ನೂನತ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಜತೆ 8 ಸಚಿವರೂ ಇಂದೇ ಪ್ರಮಾಣ ವಚನ ಸ್ವೀಕಾರ

ಪ್ರಮುಖ ಸುದ್ದಿ

ನೂನತ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಜತೆ 8 ಸಚಿವರೂ ಇಂದೇ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯದಲ್ಲಿಂದು ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದೆ. ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಇದರ ಜೊತೆಗೆ 8 ಶಾಸಕರಿಗಷ್ಟೇ ಮಂತ್ರಿ ಪಟ್ಟ ಕಟ್ಟಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ

ಸಿಎಂ, ಡಿಸಿಎಂ ಜೊತೆಗೆ 8 ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಈ 8 ನೂತನ ಸಚಿವರ ಆಯ್ಕೆ ಬಹಳಷ್ಟು ವಿಶೇಷವಾಗಿದೆ. ಕಾಂಗ್ರೆಸ್ ವರಿಷ್ಟರು ಅಳೆದು ತೂಗಿ, ಸಮುದಾಯವಾರು ಪ್ರಾತಿನಿದ್ಯ ನೀಡಿ ಆಯ್ಕೆ ಮಾಡಿದ್ದಾರೆ. ಪ್ರಮುಖವಾಗಿ ಹಿರಿಯ ಕಾಂಗ್ರೆಸ್ ನಾಯಕರಿಗೆ ಮೊದಲ ಹಂತದ ಸಚಿವ ಸಂಪುಟದಲ್ಲಿ ಆದ್ಯತೆ ನೀಡಲಾಗಿದೆ. ಈ ಬಾರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಎರಡೂ ಬಣಗಳ ಬಡಿದಾಟಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಾವುದೇ ಅವಕಾಶ ನೀಡಿಲ್ಲ. ಮೊದಲ ಹಂತದ ಸಚಿವ ಸಂಪುಟದಲ್ಲಿ ಆರು ಸಮುದಾಯಕ್ಕೆ ಅವಕಾಶ ನೀಡಲಾಗಿದೆ.

  • ನೂತನ ಸಚಿವರು
  • ಎಂ.ಬಿ ಪಾಟೀಲ್, ಲಿಂಗಾಯತ
  • ಡಾ.ಜಿ ಪರಮೇಶ್ವರ್, ದಲಿತ ಬಲ
  • ಪ್ರಿಯಾಂಕ್ ಖರ್ಗೆ, ದಲಿತ ಬಲ
  • ಕೆ.ಹೆಚ್ ಮುನಿಯಪ್ಪ, ದಲಿತ ಎಡ
  • ಕೆ.ಜೆ ಜಾರ್ಜ್, ಕ್ರಿಶ್ಚಿಯನ್
  • ಸತೀಶ್ ಜಾರಕಿಹೊಳಿ, ST (ವಾಲ್ಮೀಕಿ)
  • ಜಮೀರ್ ಅಹ್ಮದ್ ಖಾನ್, ಮುಸ್ಲಿಂ
  • ರಾಮಲಿಂಗಾ ರೆಡ್ಡಿ, ರೆಡ್ಡಿ ಒಕ್ಕಲಿಗ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top