ಬೆಂಗಳೂರು: ವಿಧಾನ ಪರಿಷತ್ನಲ್ಲಿ ತಳ್ಳಾಟ-ನೂಕಾಟ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದ ಆರಂಭಕ್ಕೆ ಬೆಲ್ ಭಾರಿಸಲಾಗಿತ್ತು. ಬೆಲ್ ನಿಂತ ಬಳಿಕವೇ ಸಭಾಪತಿ ಪೀಠದಲ್ಲಿ ಉಪಸಭಾಪತಿ ಧರ್ಮೇಗೌಡ ಅವರು ಕುಳಿತಿದ್ದರು ಎಂದು ಸ್ಪಷ್ಟಪಡಿಸಿದರು.
ತಮ್ಮ ಮೇಲೆ ಅವಿಶ್ವಾಸ ನಿರ್ಣಯ ಕೇಳಿ ಬಂದ ತಕ್ಷಣವೇ ಸಭಾಪತಿ ಅವರು ಪರಿಷತ್ನ ಗೌರವ ಉಳಿಸುವ ನಿಟ್ಟಿನಲ್ಲಿ ನಡೆದುಕೊಳ್ಳಬೇಕಿತ್ತು. ಆದರೆ ಅಧಿಕಾರ ಉಳಿಸಿಕೊಳ್ಳುವ ಹುನ್ನಾರದಲ್ಲಿ ಭಾಗಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಕಾನೂನು ಪ್ರಕಾರ ಏನು ಸಾಧ್ಯವೋ ಅದನ್ನು ಸರ್ಕಾರ ಮಾಡಲಿದೆ ಎಂದು ಹೇಳಿದ್ದಾರೆ.



