ಹಗರಿಬೊಮ್ಮನಹಳ್ಳಿ: ವಾಜಪೇಯಿ ಅವರ ಸಂಪುಟದಲ್ಲಿ ಮಂತ್ರಿ ಆದೋನು ನಾನು. ಅಂತಿಂಥವರ ಸಂಪುಟದಲ್ಲಿ ಸಚಿವನಾಗುವ ಗಿರಾಕಿ ನಾನಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಿಎಂ ಯಡಿಯೂರಪ್ಪ ವಿರುದ್ಧಕಿಡಿಕಾರಿದರು.
ಲಿಂಗಾಯತ ಪಂಚಮಸಾಲಿ ಸಮಾಜದ ಜನಜಾಗೃತ ಸಮಾವೇಶದಲ್ಲಿ ಮಾತನಾಡಿದ ಅವರು, ತಮಗೆ ಒದಗಿಸಿದ ಪೊಲೀಸ್ ಭದ್ರತೆ ಹಿಂಪಡೆದಿದ್ದಾರೆ. ಗುಪ್ತಚಾರ ದಳ ಬಿಟ್ಟಿದ್ದಾರೆ ನಾಚಿಕೆ ಆಗಬೇಕು, ಅವರ ಮುತ್ತಜ್ಜ ಬಂದ್ರೂ ನನ್ನ ಏನೂ ಕಿತ್ತುಕೊಳ್ಳೋಕೆ ಆಗಲ್ಲ ಎಂದು ವಾಗ್ದಾಳಿ ನಡೆಸಿದರು. ನನ್ನದು ಎಲ್ಲ ಸಕ್ರಮವಾಗಿದೆ. ಏನು ಬೇಕಾದ್ರೂ ಮಾಡಲಿ ಎಂದರು. ಇನ್ನೂ ಸಚಿವ ಮುರುಗೇಶ್ ನಿರಾಣಿ ಬೆಕ್ಕಿನ ಜಾತಿಯವನು. 2ಎ ಮೀಸಲಾತಿ ಹೋರಾಟವನ್ನು ಹತ್ತಿಕ್ಕಲು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.



