Connect with us

Dvgsuddi Kannada | online news portal | Kannada news online

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ; ಕಾಂಗ್ರೆಸ್ ಸೇರುವ ಸಾಧ್ಯತೆ..!

ಪ್ರಮುಖ ಸುದ್ದಿ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ; ಕಾಂಗ್ರೆಸ್ ಸೇರುವ ಸಾಧ್ಯತೆ..!

ಶಿರಸಿ: ಟಿಕೆಟ್ ಸಿಗದಕ್ಕೆ ಬಿಜೆಪಿ ಪ್ರಮುಖ ನಾಯಕರು ರಾಜೀನಾಮೆ‌ ನೀಡುವ ಪರ್ವ ಮುಂದುವರೆದಿದ್ದು, ಇಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ತೀವ್ರ ಅಸಮಾಧಾನಗೊಂಡು ಶಿರಸಿಯಲ್ಲಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿಗೆ ಬಂದು ರಾಜೀನಾಮೆ ಸಲ್ಲಿಸಿದ್ದಾರೆ.ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ ಜಗದೀಶ್ ಶೆಟ್ಟರ್​​ಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿರಲಿಲ್ಲ.

ಈ ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಗದೀಶ್ ಶೆಟ್ಟರ್ ಸಚಿವರಾಗಿ, ವಿಧಾನಸಭೆ ಸ್ಪೀಕರ್ ಆಗಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ.

ಬಿಜೆಪಿ ನಾಯಕರು‌ ರಾತ್ರಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಮನವೊಲಿಸಲು ಪ್ರಯತ್ನಿಸಿದ್ದರು. ಆದರೆ, ಈ ಸಂಧಾನ ಯಶಸ್ವಿ ಆಗಿರಲಿಲ್ಲ. ಹೀಗಾಗಿ ಉತ್ತರ ಕರ್ನಾಟಕ ಭಾಗದ ಪ್ರಬಲ ನಾಟಯಕ ಜಗದೀಶ್ ಶೆಟ್ಟರ್ ಪಕ್ಷ ತೊರೆಯುವ ನಿರ್ಧಾರಕಕ್ಕೆ ಬಂದಿದ್ದಾರೆ.

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದ್ದು, ಶೆಟ್ಟರ್ ಕಾಂಗ್ರೆಸ್ ಗೆ ಸ್ವಾಗತಿಲು ಅನೇಕ ನಾಯಕರು ತಯಾರಾಗಿದ್ದಾರೆ ಈ ನಡುವೆ ರಾಹುಲ್ ಗಾಂಧಿ ಎರಡು ದಿನಗಳ ರಾಜ್ಯ ಪ್ರವಾಸದಲ್ಲಿದ್ದಾರೆ. ಹೀಗಾಗಿ ಇಂದು ಅಥವಾ ನಾಳೆ ರಾಹುಲ್ ಸಮ್ಮುಖದಲ್ಲಿ ಶೆಟ್ಟರ್ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಸಾಧ್ಯತೆ ಇದೆ. ಲಕ್ಷ್ಮಣ್ ಸವದಿ ಬಳಿಕ ಮತ್ತೊಬ್ಬ ಪ್ರಭಾವಿ ಲಿಂಗಾಯತ ನಾಯಕ ಕಾಂಗ್ರೆಸ್ ಸೇರ್ಪಡೆಯಾದಂತಾಗುತ್ತದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top