Connect with us

Dvgsuddi Kannada | online news portal | Kannada news online

ನಾಳೆಯಿಂದ ಎರಡು ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ದಾವಣಗೆರೆ, ಚಿತ್ರದುರ್ಗ, ತುಮಕೂರು ಭೇಟಿ

images 8 2023 01 04T075621.951

ದಾವಣಗೆರೆ

ನಾಳೆಯಿಂದ ಎರಡು ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ದಾವಣಗೆರೆ, ಚಿತ್ರದುರ್ಗ, ತುಮಕೂರು ಭೇಟಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇದೇ 5, 6 ರಂದು ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್‌ ಕುಮಾರ್ ಸುರಾನ, ನಾಳೆ (ಜ.5) ಮಧ್ಯಾಹ್ನ ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ನಂತರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಚಿತ್ರದುರ್ಗದಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಕಾರ್ಯಕರ್ತ ಸಮಾವೇಶದಲ್ಲಿ ಭಾಗವಹಿಸುವರು. ಇದಾದ ನಂತರ ಮಾದಾರ ಚೆನ್ನಯ್ಯ ಗುರುಪೀಠ, ಸಿರಿಗೆರೆ ಮತ್ತು ತರಳಬಾಳು ಮಠಕ್ಕೆ ಭೇಟಿ ನೀಡುವರು.
ಜ.6 ರಂದು ಹರಿಹರದ ಪಂಚಮಸಾಲಿ ಮಠ, ಬೆಳ್ಳುಡಿಯ ಕನಕಗುರುಪೀಠ, ರಾಜನಹಳ್ಳಿಯ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬೂತ್‌ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ ತುಮಕೂರು ಜಿಲ್ಲೆ ಸಿರಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸುವರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top