ಬೆಂಗಳೂರು: ಕಾಗೆ ಹಿಕ್ಕೆ ಹಾಕಿದ್ದಕ್ಕೂ ಮೂಗು ತೂರಿಸುವ ಸೆಕ್ಷನ್ ಸಿದ್ದರಾಮಯ್ಯ ಸಿಡಿಗೇಟ್ ಷಡ್ಯಂತ್ರದಲ್ಲಿ ಡಿಕೆ ಶಿವಕುಮಾರ್ ಅವರ ಪಾತ್ರದ ಬಗ್ಗೆ ಏಕೆ ಇನ್ನೂ ಮೌನವಾಗಿದ್ದೀರಿ? ಎಂದು ಬಿಜೆಪಿ ಪ್ರಶ್ನಿಸಿದೆ. ಯಾವ ಸೆಕ್ಷನ್ ಪ್ರಕಾರ ಇದು ಅಪರಾಧವಾಗುತ್ತದೆ ಎಂದು ಜನರ ಮುಂದೆ ತೆರೆದಿಡಿ ಎಂದು ಬಿಜೆಪಿ ಟ್ವೀಟರ್ ಖಾತೆಯಲ್ಲಿ ಒತ್ತಾಯಿಸಲಾಗಿದೆ.
ಕಾಗೆ ಹಿಕ್ಕೆ ಹಾಕಿದ್ದಕ್ಕೂ ಮೂಗು ತೂರಿಸುವ ಸೆಕ್ಷನ್ @siddaramaiah ಅವರೇ,#CDGate ಷಡ್ಯಂತ್ರದಲ್ಲಿ @DKShivakumar ಅವರ ಪಾತ್ರದ ಬಗ್ಗೆ ಏಕೆ ಇನ್ನೂ ಮೌನವಾಗಿದ್ದೀರಿ?
ಯಾವ ಸೆಕ್ಷನ್ ಪ್ರಕಾರ ಇದು ಅಪರಾಧವಾಗುತ್ತದೆ ಎಂದು ಜನರ ಮುಂದೆ ತೆರೆದಿಡಿ.#DKShiMustResign
— BJP Karnataka (@BJP4Karnataka) March 27, 2021
ಸಹಾಯ ಮಾಡುವುದಕ್ಕೂ ಷಡ್ಯಂತ್ರದಲ್ಲಿ ಭಾಗಿಯಾಗುವುದಕ್ಕೂ ವ್ಯತ್ಯಾಸವಿದೆ. ಷಡ್ಯಂತ್ರದ ಭಾಗವಾಗಿದ್ದುಕೊಂಡ ಕಾರಣದಿಂದಲೇ ಹೆಗಲು ಮುಟ್ಟಿ ನೋಡಿಕೊಂಡಿದ್ದಲ್ಲವೇ? ಮಹಾನಾಯಕರೇ, ಪ್ರಕರಣದ ಪ್ರಮುಖ ಮಾಸ್ಟರ್ ಮೈಂಡ್ ಗಳೊಂದಿಗೆ ಅದೂ ಈ ಪ್ರಕರಣದ ಬಳಿಕ ಸಂಬಂಧ ಹೊಂದಿರಲು ಅದು ಹೇಗೆ ಸಾಧ್ಯ? ಎಂದು ಪ್ರಶ್ನಿಸಲಾಗಿದೆ.
ಮಾನ್ಯ @DKShivakumar,
ಆರಂಭದಲ್ಲಿ ಹೆಗಲು ಮುಟ್ಟಿಕೊಡು ನನ್ನನ್ನು ಸಿಲುಕಿಸುವ ಪ್ರಯತ್ನ ಎಂದಿರಿ.
ಈಗ ಸಂತ್ರಸ್ಥೆ ನನ್ನ ಭೇಟಿಗೆ ಪ್ರಯತ್ನಿಸಿದ್ದು ನಿಜ, ನರೇಶ್ ಮನೆಗೆ ಹೋಗಿದ್ದೇನೆ ಎನ್ನುತ್ತಿದ್ದೀರಿ.
ಅಂದರೆ ಪ್ರಕರಣದ ಎಲ್ಲಾ ಆಗುಹೋಗುಗಳು ನಿಮ್ಮ ನಿಯಂತ್ರಣದಲ್ಲೇ ನಡೆಯುತ್ತಿತ್ತು ಎಂಬುದು ಸ್ಪಷ್ಟ ಅಲ್ಲವೇ?#DKShiMustResign
— BJP Karnataka (@BJP4Karnataka) March 27, 2021
ಡಿಕೆ ಶಿವಕುಮಾರ್ ಅವರೇ ಆರಂಭದಲ್ಲಿ ಹೆಗಲು ಮುಟ್ಟಿಕೊಡು ನನ್ನನ್ನು ಸಿಲುಕಿಸುವ ಪ್ರಯತ್ನ ಎಂದಿರಿ. ಈಗ ಸಂತ್ರಸ್ಥೆ ನನ್ನ ಭೇಟಿಗೆ ಪ್ರಯತ್ನಿಸಿದ್ದು ನಿಜ, ನರೇಶ್ ಮನೆಗೆ ಹೋಗಿದ್ದೇನೆ ಎನ್ನುತ್ತಿದ್ದೀರಿ. ಅಂದರೆ ಪ್ರಕರಣದ ಎಲ್ಲಾ ಆಗುಹೋಗುಗಳು ನಿಮ್ಮ ನಿಯಂತ್ರಣದಲ್ಲೇ ನಡೆಯುತ್ತಿತ್ತು ಎಂಬುದು ಸ್ಪಷ್ಟ ಅಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ.



