ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆಯ ನಂತರ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ತಮ್ಮ ವಿರುದ್ಧ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ರಾಜ್ಯ 6 ಸಚಿವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಕುಂಬಳಕಾಯಿ ಕಳ್ಳ ಅಂದರೆ ಕರ್ನಾಟಕ ಬಿಜೆಪಿಯ ಸಚಿವರೇಕೆ ಹೆಗಲು ಮುಟ್ಟಿ ನೋಡಿಕೊಳ್ತಿದ್ದಾರೆ? ಕರ್ನಾಟಕ ಕಾಂಗ್ರೆಸ್ ಕಾಲೆಳೆದಿದೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಕುಂಬಳಕಾಯಿ ಕಳ್ಳ ಅಂದರೆ ಕರ್ನಾಟಕ ಬಿಜೆಪಿಯ ಸಚಿವರೇಕೆ ಹೆಗಲು ಮುಟ್ಟಿ ನೋಡಿಕೊಳ್ತಿದ್ದಾರೆ? ಸಿಡಿ ಶಬ್ದ ಕೇಳಿದರೆ ಸರ್ಕಾರದ ಇಡೀ ಸಂಪುಟವೇ ಏಕೆ ಬೆಚ್ಚಿ ಬೀಳುತ್ತಿದೆ? 6 ಸಚಿವರು ಏಕೆ ಸುದ್ದಿ ಪ್ರಸಾರಕ್ಕೆ ಮುಂಜಾಗ್ರತೆಯಲ್ಲಿ ತಡೆ ತರುತ್ತಿದ್ದಾರೆ? ಸರ್ಕಾರದ ರಚನೆಯಿಂದ ಹಿಡಿದು ಸಂಪುಟ ವಿಸ್ತರಣೆಯವರೆಗೂ ಬೃಹತ್ ಹಗರಣ ಅಡಗಿದೆ ಎಂದು ಕಿಡಿ ಕಾರಿದೆ.
ಕುಂಬಳಕಾಯಿ ಕಳ್ಳ ಅಂದರೆ @BJP4Karnataka ಸಚಿವರೇಕೆ ಹೆಗಲು ಮುಟ್ಟಿ ನೋಡಿಕೊಳ್ತಿದ್ದಾರೆ?
ಸಿಡಿ ಶಬ್ದ ಕೇಳಿದರೆ ಸರ್ಕಾರದ ಇಡೀ ಸಂಪುಟವೇ ಏಕೆ ಬೆಚ್ಚಿ ಬೀಳುತ್ತಿದೆ?
6 ಸಚಿವರು ಏಕೆ ಸುದ್ದಿ ಪ್ರಸಾರಕ್ಕೆ ಮುಂಜಾಗ್ರತೆಯಲ್ಲಿ ತಡೆ ತರುತ್ತಿದ್ದಾರೆ?
ಸರ್ಕಾರದ ರಚನೆಯಿಂದ ಹಿಡಿದು ಸಂಪುಟ ವಿಸ್ತರಣೆಯವರೆಗೂ ಬೃಹತ್ ಹಗರಣ ಅಡಗಿದೆ.#CDsarkara
— Karnataka Congress (@INCKarnataka) March 6, 2021



