ಮೈಸೂರು: ಡಿಕೆ.ಶಿವಕುಮಾರ್ ಬಹಳ ಮೆಚುರ್ಡ್ ಪೊಲಿಟಿಶಿಯನ್. ಅವರಿಗೆ ಇರುವ ಅನುಭವ ನಮಗೂ ಇಲ್ಲ. ನಿನ್ನೆ ದುಡುಕಿ ಅವರ ಹೆಸರನ್ನು ಅವರೇ ಹೇಳಿದ್ದಾರೆ. ಯಾಕೆ ಈ ಸಿಡಿ ಪ್ರಕರಣಕ್ಕೆ ಅವರ ಹೆಸರು ಸಿಲುಕಿಸಿಕೊಳ್ಳಲು ಹೊರಟಿದ್ದಾರೆ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎಷ್ಟೋ ಜನ ಮಹಾನ್ ನಾಯಕರಿದ್ದಾರೆ. ಡಿಕೆ ಶಿವಕುಮಾರ್ ಅವರೇ ಏಕೆ ಮುಂದೆ ಬಿಟ್ಟುಕೊಂಡಿದ್ದಾರೆ. ಅವರೇ ಮಾಡಿದ್ದಾರೆಂದು ಯಾರಾದರೂ ಹೇಳಿದರಾ ಎಂದು ಪ್ರಶ್ನಿಸಿದರು.
ಬಿಜೆಪಿಯಲ್ಲೇ ಒಬ್ಬರು ಮಹಾನ್ ನಾಯಕರು ಬೆಳೆಯುತ್ತಿದ್ದಾರೆ. ಯಾವ ಮಹಾನ್ ನಾಯಕರು ಅಂತ ಹೇಳಿದ್ದಾರೆ ಗೊತ್ತಿಲ್ಲ. ಡಿಕೆಶಿಯವರು ತಾವೆ ಅಂತ ಯಾಕೆ ಅಂದುಕೊಂಡರೋ ಗೊತ್ತಿಲ್ಲ.ಈ ಪ್ರಕರಣವನ್ನು ಎಲ್ಲರೂ ಹುಡುಗಾಟಿಕೆಯಾಗಿ ತೆಗೆದುಕೊಂಡಿದ್ದಾರೆ. ಯಾರಿಗೂ ಗಂಭೀರತೆ ಇಲ್ಲ. ಇದರಿಂದ ರಾಜ್ಯದ ಗೌರವ ಹಾಳಾಗುತ್ತಿದೆ. ಅಧಿಕಾರಿಗಳು ಯಾವುದೇ ಪ್ರಭಾವಕ್ಕೆ ಒಳಗಾಗಬಾರದು. ರಾಜ್ಯದ ಗೌರವ ಉಳಿಸಲು ನಿಷ್ಪಕ್ಷಪಾತ ತನಿಖೆ ಮಾಡಬೇಕು ಎಂದು ಕುಮಾರಸ್ವಾಮಿ ಹೇಳಿದರು.



