BREAKING NEWS: ಸಿಡಿ ಪ್ರಕರಣ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಬಂದ ಹಿನ್ನಲೆ  ಜಲ ಸಂಪನ್ಮೂಲ ಸಚಿವ  ರಮೇಶ್ ಜಾರಕಿ ಹೊಳಿ ಅವರು ಸಿಎಂ ಯಡಿಯೂರಪ್ಪ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ನಿನ್ನೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಸಿಡಿ ಬಿಡುಗಡೆ ಮಾಡಿದ ನಂತರ ರಾಜ್ಯ ರಾಜಕಾರಣದಲ್ಲಿ  ಸಂಚಲನ ಉಂಟು ಮಾಡಲಾಗಿತ್ತು. ಪ್ರತಿ ಪಕ್ಷಗಳು ಸಚಿವರ ರಾಜೀನಾಮೆಗೆ ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗಿತ್ತು.

ಈ ಪ್ರಕಣದಿಂದ ಪಕ್ಷಕ್ಕೆ ಆಗುವ ಮುಜುಗರ ತಪ್ಪಿಸಲು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ರಮೇಶ್ ಜಾರಕಿ ಹೊಳಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣದಲ್ಲಿ ನಿರ್ದೋಷಿಯಾದ ಬಳಿಕ ಸಚಿವ ಸ್ಥಾನ ನೀಡಿ ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *