ಹುಬ್ಬಳ್ಳಿ: ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯೊಬ್ಬರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೆಸರಲ್ಲಿ ಜನಸಾಮಾನ್ಯರಿಗೆ ಲೋನ್ ಕೊಡಿಸುವುದಾಗಿ ಹೇಳಿ ವಂಚನೆಯೆಸಗಿರುವ ಸಂಗತಿ ಬಯಲಿಗೆ ಬಂದಿದೆ.
ಹುಬ್ಬಳ್ಳಿ-ಧಾರವಾಡದ ಕಾಂಗ್ರೆಸ್ ನಾಯಕಿ ಪೂರ್ಣಿಮಾ ಸವದತ್ತಿ ಎಂಬ ಮಹಿಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕಪ್ಪು ಹಣದಲ್ಲಿ ಲೋನ್ ಕೊಡಿಸುವುದಾಗಿ ಹೇಳಿ ಜನರಿಗೆ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿದ್ದಾರೆಂಬ ಆರೋಪ ಕೇಳಿಬಂದಿದೆ.
ಕಾಂಗ್ರೆಸ್ ನಾಯಕರ ಹೆಸರು ಹೇಳಿ ವಿದ್ಯಾರ್ಥಿ ಲೋನ್, ಹೋಮ್ ಲೋನ್ ಸೇರಿದಂತೆ ವಿವಿಧ ಲೋನ್ ಗಳನ್ನು ಕಡಿಮೆ ಬಡ್ಡಿ ದರದಲ್ಲಿ ಕೊಡುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ್ದಾಳೆ. ಮಹಿಳೆಯಿಂದ ಮೋಸ ಹೋದವರು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ



