ಬೆಂಗಳೂರು; ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್ ಪಜ್ಷದಿಂದ ಇಂದು ರಾಜಭವನ ಚಲೋ ರ್ಯಾಲಿ ನಡೆಸಲಾಯಿತು. ಬೆಂಗಳೂರು ಮೆಜೆಸ್ಟಿಕ್ನಿಂದ ಆರಂಭವಾದ ರ್ಯಾಲಿ ರಾಜಭವನದತ್ತ ಹೊರಟಿತು. ರಾಜಭವನ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದರು. ಬಳಿಕ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ವಶಕ್ಕೆ ಪಡೆದ ಕೈ ಕಾರ್ಯಕರ್ತರನ್ನು ಬಿಎಂಟಿಸಿ ಬಸ್ ನಲ್ಲಿ ಕರೆದುಕೊಂಡು ಹೋಗಲಾಯಿತು. ಬಳಿಕ ಕಾಂಗ್ರೆಸ್ ಮುಖಂಡರಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಅವರನ್ನು ಬಂಧಿಸಲಾಯಿತು.
ಕಾಂಗ್ರೆಸ್ ರ್ಯಾಲಿ ಮೆಜೆಸ್ಟಿಕ್ನ ಕೆಎಸ್ಆರ್ ರೈಲು ನಿಲ್ದಾಣದಿಂದ ಆರಂಭವಾಗಯಿತು. ಕೆಎಸ್ಆರ್ ರೈಲು ನಿಲ್ದಾಣ, ಸಂಗೊಳ್ಳಿ ರಾಯಣ್ಣ ವೃತ್ತ, ಆನಂದ ರಾವ್ ಫ್ಲೈಓವರ್ ಮೂಲಕ ಫ್ರೀಡಂ ಪಾರ್ಕ್ ಬಳಿಕ ರಾಜಭವನ ಚಲೋ ಕಾರ್ಯಕ್ರಮ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ರೈತರು ಭಾಗಿಯಾಗಿದ್ದಾರೆ. ಮಹಾರಾಣಿ ಕಾಲೇಜು ಮುಂಭಾಗದ ರಸ್ತೆಯಲ್ಲಿ ರ್ಯಾಲಿ ತಡೆದ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ವಶಕ್ಕೆ ಪಡೆ ಕಾರ್ಯಕರ್ತರನ್ನು ನಾಲ್ಕು ಬಿಎಂಟಿಸಿ ಬಸ್ ನಲ್ಲಿ ತುಂಬಿಸಿಕೊಂಡು ಕರೆದೊಯ್ಯುಲಾಯಿತು. ಈ ರ್ಯಾಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು. ಕಾಂಗ್ರೆಸ್ ರಾಜಭವನ ಚಲೋ ರ್ಯಾಲಿಗೆ ಬೆಂಗಳೂರು ನಗರ ಪೊಲೀಸ್ ಅನುಮತಿ ಕೊಟ್ಟಿರಲಿಲ್ಲ.



