ಬೆಂಗಳೂರು: ಕಾಂಗ್ರೆಸ್ ತೊರೆಯುವ ಸೂಚನೆ ನೀಡಿದ್ದ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರನ್ನು ಕೆಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಚರ್ಚಿಸಿದ್ದಾರೆ.
ಬೆಂಗಳೂರಿನ ಬೆನ್ಸನ್ ಟೌನ್ ನಲ್ಲಿರುವ ಇಬ್ರಾಹಿಂ ಅವರ ಮನೆಗೆ ತೆರಳಿದ ಶಿವಕುಮಾರ್, ಸದ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದರು.ಇತ್ತೀಚೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಇಬ್ರಾಹಿಂ ಅವರನ್ನು ಭೇಟಿ ಮಾಡಿದ್ದರು.
ಇಬ್ರಾಹಿಂ ಮತ್ತೆ ಜೆಡಿಎಸ್ ಸೇರಲು ಒಲವು ತೋರಿದ್ದಾರೆ. ರಾಜ್ಯದಾದ್ಯಂತ ಪ್ರವಾಸ ಮಾಡಿ ಜೆಡಿಎಸ್ ಸೇರುವ ಬಗ್ಗೆ ಅಂತಿಮ ತೀರ್ಮಾನ ತಿಳಿಸುವುದಾಗಿ ಇಬ್ರಾಹಿಂ ಹೇಳಿಕೆ ನೀಡಿದ್ದರು.



