ಬೆಂಗಳೂರು : ಸಮಾಜವಾದಿ ಅಂತ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಅಧಿಕಾರದಲ್ಲಿದ್ದಾಗ ಮಜಾವಾಯಾಗಿದ್ದರು. ಸಿದ್ದರಾಮಯ್ಯ ಹೇಳಿದಂತೆ ಬದುಕಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಮಾತಿನಿಂದ ತಮ್ಮದೇ ಪಕ್ಷದೊಳಗೆ ವಿರೋಧಿಗಳಿದ್ದಾರೆ ಎನ್ನುವ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ಯಾರು ತಮ್ಮ ವಿರೋಧಿ ಅಂತ ಅವರೇ ಹೇಳಲಿ ಎಂದು ಪ್ರಶ್ನಿಸಿದಂತ ಅವರು, ಧಮ್ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಾರೆ. ಈಗ ಸಿದ್ದರಾಮಯ್ಯ ತಮ್ಮ ಧಮ್ ತೋರಿಸಲಿ ಎಂದು ತಿರುಗೇಟು ನೀಡಿದರು.
ಸಿದ್ದರಾಮಯ್ಯ ಹೇಳಿದಂತೆ ಬದುಕಲಿಲ್ಲ. ಸಮಾಜವಾದಿ ಅಂತ ಸಿದ್ದರಾಮಯ್ಯ ಹೇಳಿದ್ರು. ಆದರೆ, ಅಧಿಕಾರದಲ್ಲಿದ್ದಾಗ ಮಜಾವಾದಿಯಾಗಿದ್ದರು. ಈ ಬಗ್ಗೆ ಸಿದ್ದರಾಮಯ್ಯ ಅವಲೋಕನ ಮಾಡಿಕೊಳ್ಳಲಿ ಎಂದು ಟಾಂಗ್ ನೀಡಿದರು.



