ಶಾಮನೂರು ಶಿವಶಂಕರಪ್ಪಗೆ ಲಿಂಗಾಯತರೇ ವೋಟ್ ಹಾಕಿಲ್ಲ; ಅವರಿಗೆ ಯಾಕೆ ದಾವಣಗೆರೆ ಎಂಪಿ ಚುನಾವಣೆ ಗೆಲ್ಲಲು ಆಗ್ತಿಲ್ಲ; ಎಂಎಲ್ ಸಿ ಎಚ್.‌ವಿಶ್ವನಾಥ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಮೈಸೂರು: ಲಿಂಗಾಯತ ಸಮುದಾಯದವರೇ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ವೋಟ್ ಹಾಕಿಲ್ಲ. ಪ್ರತಿ ಬಾರಿ ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆಯಲ್ಲಿ ತಮ್ಮ ಬೀಗರನ್ನು ಗೆಲ್ಲಿಸಿಕೊಳ್ಳುತ್ತಿದ್ದು, ಕಾಂಗ್ರೆಸ್‌‍ ಅಭ್ಯರ್ಥಿಯನ್ನು ಯಾಕೇ ಗೆಲ್ಲಿಸಿಕೊಳ್ಳುತ್ತಿಲ್ಲ‌ ಎಂಬುದನ್ನು ಮೊದಲು ತಿಳಿಸಲಿ ಎಂದು ಎಂಎಲ್ ಸಿ ಎಚ್‌.ವಿಶ್ವನಾಥ್‌ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ‌ ನಡೆದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಶಾಮನೂರು ಅವರು 7 ಬಾರಿ ಗೆದ್ದಿರುವುದು ಸ್ವಂತ ವರ್ಚಸ್ಸಿನಿಂದ ಅಲ್ಲ. ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಮತಗಳಿಂದ ಗೆದ್ದಿದ್ದಾರೆ. ಲಿಂಗಾಯತ ಸಮುದಾಯವೇ ಅವರಿಗೆ ವೋಟ್ ಹಾಕಿಲ್ಲ. ದಾವಣಗೆರೆಯನ್ನು ಅಪ್ಪ ಮಕ್ಕಳೇ ವಹಿಸಿಕೊಂಡಿದ್ದಾರೆ. ಹೀಗಾಗಿ ಅವರು ಯಾರಿಂದ ಗೆದ್ದಿದ್ದಾರೆ. ಯಾಕೇ ಎಂಪಿ ಚುನಾವಣೆ ಗೆಲ್ಲಲು ಆಗುತ್ತಿಲ್ಲ ಎಂದು ತಿಳಿಸಲಿ ಎಂದರು.

ಈ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಗಳಿಗೆ ಅನ್ಯಾಯವಾಗಿದೆ ಎಂದು ಹಿರಿಯ ಶಾಸಕ ಶಾಮನೂರು ಶಿವಶಂಕಪ್ಪ ಮಾತನಾಡಿದ್ದರು. ಇದಕ್ಕೆ ಶಿವಶಂಕರಪ್ಪ ವಿರುದ್ಧ‌ ಎಂಎಲ್ ಸಿ ವಿಶ್ವನಾಥ್ ಕಿಡಿಕಾರಿದ್ದರು. ವಿಶ್ವನಾಥ ರೀತಿ ನಾನು ಯಾರಿಗೋ ಬೆಣ್ಣೆ ಹಚ್ಚಿ ಎಂಎಲ್​ಸಿ ಆಗಿಲ್ಲ.‌ ನಾನು ಜನರಿಂದ 7 ಬಾರಿ ಆಯ್ಕೆಯಾಗಿದ್ದೇನೆ.  ಹೆಚ್. ವಿಶ್ವನಾಥ್​ಗೆ ಹುಚ್ಚಾಸ್ಪತ್ರೆಗೆ ಕಳುಹಿಸಬೇಕು ಎಂದು ಶಾಮನೂರು ಶಿವಶಂಕರಪ್ಪ ಕಿಡಿಕಾರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *