ಸಿದ್ದರಾಮಯ್ಯ ಪಕ್ಷ , ಸಮುದಾಯ ಎರಡರಲ್ಲೂ ಏಕಾಂಗಿ: ಎಚ್. ವಿಶ್ವನಾಥ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಮೈಸೂರು: ಸಿದ್ದರಾಮಯ್ಯ ಅವರಲ್ಲಿ ನಾನು ನಾನು ಅನ್ನೋ ಸ್ವಾರ್ಥ ಇತ್ತು. ಸಮುದಾಯ ನನ್ನ ಜೊತೆ ಇಲ್ಲ ಅನ್ನೋದು ಈಗ ಅವರಿಗೆ ಅರಿವಾಗಿದೆ. ಡಿ. ಕೆ. ಶಿವಕುಮಾರ್ ನಾಯಕತ್ವ ಪ್ರಬಲವಾಗುತ್ತಿದೆ. ಪಕ್ಷ ಹಾಗೂ ಸಮುದಾಯ ಎರಡರಲ್ಲೂ ಸಿದ್ದರಾಮಯ್ಯ ಏಕಾಂಗಿಯಾಗುತ್ತಿದ್ದಾರೆ ಎಂದು ಬಿಜೆಪಿ ಎಂಎಲ್ಸಿ ವಿಶ್ವನಾಥ್ ಹೇಳಿದರು.

ಮೈಸೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಇದು ಯಾವ ಅಹಿಂದ ಹೋರಾಟವೂ ಅಲ್ಲ. ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಅವರ ಸ್ವಾರ್ಥದ ಹೋರಾಟ. ಸಿದ್ದರಾಮಯ್ಯ ಅಹಿಂದ ಎಂದು ಚಡಪಡಿಸುತ್ತಿದ್ದಾರೆ ಅವರಿಗೆ ಅಸ್ತಿತ್ವ, ಅಭದ್ರತೆ ಕಾಡುತ್ತಿದೆ ಎಂದು ಟೀಕಿಸಿದರು.

ಕುರುಬ ಸಮಾಜದ ಎಸ್‌ಟಿ ಹೋರಾಟ ಸಿದ್ದರಾಮಯ್ಯ ಅವರಿಲ್ಲದೆ ಯಶಸ್ವಿಯಾಗಿದೆ. ಲಕ್ಷಾಂತರ ಜನರು ಸೇರಿಸಿ ಯಶಸ್ಸು ಕಂಡಿದ್ದೇವೆ. ನಾನು ಇಲ್ಲದಿದ್ದರೆ ಆಗಲ್ಲ ಅಂದು ಕೊಂಡಿದ್ದರು ಎಂದು ಕುಟುಕಿದರು.ರಾಜಕೀಯ ಅಸ್ತಿತ್ವಕ್ಕೆ ಚಡಪಡಿಕೆ ಶುರುವಾಗಿದೆ. ನಾನು ಸಿದ್ದರಾಮಯ್ಯ ಮೈಸೂರಿನಲ್ಲೇ ಓದಿದ್ದು. ಅವರು ಯಾವ ವಿದ್ಯಾರ್ಥಿ ಹೋರಾಟದಲ್ಲೂ ಇರಲಿಲ್ಲ. ತಮ್ಮ ಅಭದ್ರತೆ ಮುಚ್ಚಿಕೊಳ್ಳಲು ಅಹಿಂದ ಬಳಸುತ್ತಿದ್ದಾರೆ. ಅಲ್ಪಸಂಖ್ಯಾತರರನ್ನು ಬಿಟ್ಟು ಅಹಿಂದ ಹೋರಾಟ ನಡೆಸುತ್ತಿದ್ದಾರೆ. ಈಗಾಗಲೇ ಅಲ್ಪಸಂಖ್ಯಾತರನ್ನು ತುಳಿದು ಹಾಕಿದ್ದಾರೆ, ಮುಸ್ಲಿಂಮರನ್ನು ಸಾಕಷ್ಟು ಬಾರಿ ಸೋಲಿಸಲು ಕಾರಣರಾಗಿದ್ದಾರೆ‌ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದಂತೆ. ಇದು ಟ್ರಂಪಾಯಣದಂತೆ ಸಿದ್ದರಾಮಾಯಣ ನಡೆಯುತ್ತಿದೆ. ಸೋಲನ್ನು ಒಪ್ಪಿಕೊಳ್ಳಲು ಅವರು ಸಿದ್ದರಿಲ್ಲ. ಸಿದ್ದು ಕಾಂಗ್ರೆಸ್ ಸಂಸ್ಕಾರ, ಸಂಸ್ಕೃತಿ ಇಲ್ಲದ ಮನುಷ್ಯ. ಅಚಾನಕ್ ಆಗಿ ನಾವು ಕರೆದುಕೊಂಡು ಬಂದಿದ್ದಕ್ಕೆ ಸಿಎಂ ಆದವರು. ಅದೃಷ್ಟದಿಂದ ಸಿಎಂ ಆದವರು ಸಿದ್ದರಾಮಯ್ಯ ಯಾರ ಯಶಸ್ಸನ್ನು ಸಹಿಸುವುದಿಲ್ಲ. ತಮ್ಮ ಸಮುದಾಯದ ಸ್ವಾಮೀಜಿಯವರ ಹೋರಾಟವನ್ನು ಅವರು ಸಹಿಸುವುದಿಲ್ಲ ಎಂದು ವಿಶ್ವನಾಥ್ ದೂರಿದರು.

ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ. ಯಡಿಯೂರಪ್ಪ ನೋಡಿದ ಕೂಡಲೇ ಅವರಿಗೆ ಸಿಎಂ ಎಂಬ ಮಿಠಾಯಿ ನೆನಪಾಗುತ್ತದೆ. ಅದ‌ನ್ನು ಒಮ್ಮೆ ಪಡೆಯಬೇಕೆಂಬ ಚಡಪಡಿಕೆ ಅವರಿಗೆ. ಹೀಗಾಗಿ ನಾಯಕತ್ವದ ಬದಲಾವಣೆ ಬಗ್ಗೆ ಮಾತನಾಡುತ್ತಾರೆ. ಅದು ನಮ್ಮ ಪಕ್ಷದ ಆಂತರಿಕ ವಿಚಾರ ಇವರಿಗೇಕೆ? ಎಂದು ಪ್ರಶ್ನಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *