ವಿಧಾನ ಪರಿಷತ್:  ಕಾಂಗ್ರೆಸ್- ಬಿಜೆಪಿ ಸದಸ್ಯರ ನಡುವೆ ನೂಕಾಟ-ತಳ್ಳಾಟ…!  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಇಂದು ವಿಧಾನ ಪರಿಷತ್ ಕಲಾಪ ರಣಾಂಗಣವಾಗಿ ಮಾರ್ಪಟ್ಟಿದ್ದು, ಮೇಲ್ಮನೆಯಲ್ಲಿ ಜನ ಪ್ರತಿನಿಧಿಗಳೇ ಕಿತ್ತಾಡಿಕೊಡಿದ್ದಾರೆ. ಉಪಸಭಾಪತಿಯನ್ನು ನೂಕಾಟ-ತಳ್ಳಾಟ ನಡೆಸಿದ್ದಾರೆ. ಉಪಸಭಾಪತಿ ಶಿಷ್ಟಾಚಾರ ಉಲ್ಲಂಘನೆಯೇ ಸಂಘರ್ಷಕ್ಕೆ ಕಾರಣ ಎನ್ನಲಾಗಿದೆ.

ವಿಧಾನ ಪರಿಷತ್ ಕಲಾಪದಲ್ಲಿ ಶಿಷ್ಠಾಚಾರ ಉಲ್ಲಂಘನೆಯಾಗಿದ್ದು, ಬೆಲ್ ಮುಗಿಯುವ ಮೊದಲೇ ಉಪಸಭಾಪತಿ ಧರ್ಮೇಗೌಡ ಸಭಾಪತಿ ಪೀಠವನ್ನು ಅಲಂಕರಿಸಿದ್ದು, ಇದು  ಕಾಂಗ್ರೆಸ್ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದೆ. ಬೆಲ್ ಮುಗಿದ ಬಳಿಕ ಮಾರ್ಷಲ್ ಬಂದು ತಿಳಿಸಿದ ನಂತರ ಸಭಾಪತಿ ಅಥವಾ ಉಪಸಭಾಪತಿ ಪೀಠದಲ್ಲಿ ಆಸೀನರಾಗಬೇಕು. ಆದರೆ ಉಪಸಭಾಪತಿ ಶಿಷ್ಠಾಚಾರ ಉಲ್ಲಂಘಿಸಿ, ಬಿಜೆಪಿ ಯೋಜನೆಯಂತೆ ನೇರವಾಗಿ ಬಂದು ಸಭಾಪತಿ ಕುರ್ಚಿಯಲ್ಲಿ ಕುಳಿತಿದ್ದಾರೆ. ಇದರಿಂದ ಕಾಂಗ್ರೆಸ್ ಸದಸ್ಯರ ಅಸಮಾಧಾನ ಭುಗಿಲೆದ್ದಿದ್ದು, ಉಪಸಭಾಪತಿಯನ್ನು ಎಳೆದಾಡಿದ್ದಾರೆ.

ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಸದನದಲ್ಲಿ ನೂಕಾಟ ತಳ್ಳಾಟ ಆರಂಭವಾಗುತ್ತಿದ್ದಂತೆಯೇ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಕಲಾಪವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಿ ಆದೇಶ ನೀಡಿದ್ದಾರೆ. ಆದರೂ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಸಂಘರ್ಷ ಮುಂದುವರೆದಿದ್ದು, ಸಭಾಪತಿ ಸ್ಥಾನದಲ್ಲಿ ಯಾರೂ ಕೂರದಂತೆ ಗಲಾಟೆ ಮುಂದುವರೆದಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *