ಕೆಪಿಸಿಸಿ ಕಚೇರಿಯಲ್ಲಿಯೇ ಕೈ-ಕೈ ಮಿಲಾಯಿಸಿದ ನಾಯಕರು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಂಎಲ್​ಸಿ ನಾರಾಯಣಸ್ವಾಮಿ ಮತ್ತು ಕಾಂಗ್ರೆಸ್ ಯುವ ನಾಯಕ ಮನೋಹರ್ ನಡುವೆ ಗಲಾಟೆ ನಡೆದಿದೆ. ಇಬ್ಬರ ನಾಯಕರು ಕೈ-ಕೈ ಮಿಲಾಯಿಸಿಕೊಂಡಿದ್ದಾರೆ.

ಕಾಂಗ್ರೆಸ್ ಎಂಎಲ್ಸಿ ನಾರಾಯಣಸ್ವಾಮಿ ಹಾಗೂ ರಾಜಾಜಿನಗರ ಕಾಂಗ್ರೆಸ್ ಯುವ ನಾಯಕ ಮೋನಹರ್ ನಡುವೆ ಮಧ್ಯಾಹ್ನ ಈ ಘಟನೆ ನಡೆದಿದೆ. ಕಾರ್ಯಾಧ್ಯಕ್ಷರುಗಳ ಸಮ್ಮುಖದಲ್ಲಿಯೇ ಈ ಗಲಾಟೆ ನಡೆದಿದೆ. ಕೆಪಿಸಿಸಿ ಸಿಬ್ಬಂದಿಗಳು ಇಬ್ಬರನ್ನೂ ಪ್ರತ್ಯೇಕ ರೂಮಿನಲ್ಲಿ ಕೂರಿಸಿ ಸಮಧಾನಪಡಿಸಿದ್ದಾರೆ. ಕೆಲ ಸಮಯದ ಬಳಿಕ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಅವರು ಕೆಪಿಸಿಸಿ ಕಚೇರಿಯಿಂದ ಹೊರನಡೆದರು.

ಘಟನೆ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮಾತನಾಡಿ, ಯಾವುದೇ ಗಲಾಟೆ ನಡೆದಿಲ್ಲ. ಬೆಳಗ್ಗೆ ಪಂಚಾಯಿತಿ ಸದಸ್ಯರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಅವರು ನಮ್ಮ ಸದಸ್ಯರನ್ನ ಸೆಳೆಯುವ ಕೆಲಸ ಮಾಡಿದ್ದರು. ಆ ವಿಚಾರವಾಗಿ ಜೋರುಜೋರು ಮಾತು ನಡೆಯಿತು. ಆದ್ರೆ, ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ. ನಾವು ಬಾಗಿಲು ಹಾಕಿ ಪಕ್ಷದ ವಿಚಾರ ಚರ್ಚೆ ಮಾಡಿದ್ದೇವೆ. ಚರ್ಚೆಯನ್ನ ಹೊರತುಪಡಿಸಿ ಬೇರೆ ಏನು ನಡೆದಿಲ್ಲ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *