ಬೆಂಗಳೂರು: ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಂಎಲ್ಸಿ ನಾರಾಯಣಸ್ವಾಮಿ ಮತ್ತು ಕಾಂಗ್ರೆಸ್ ಯುವ ನಾಯಕ ಮನೋಹರ್ ನಡುವೆ ಗಲಾಟೆ ನಡೆದಿದೆ. ಇಬ್ಬರ ನಾಯಕರು ಕೈ-ಕೈ ಮಿಲಾಯಿಸಿಕೊಂಡಿದ್ದಾರೆ.
ಕಾಂಗ್ರೆಸ್ ಎಂಎಲ್ಸಿ ನಾರಾಯಣಸ್ವಾಮಿ ಹಾಗೂ ರಾಜಾಜಿನಗರ ಕಾಂಗ್ರೆಸ್ ಯುವ ನಾಯಕ ಮೋನಹರ್ ನಡುವೆ ಮಧ್ಯಾಹ್ನ ಈ ಘಟನೆ ನಡೆದಿದೆ. ಕಾರ್ಯಾಧ್ಯಕ್ಷರುಗಳ ಸಮ್ಮುಖದಲ್ಲಿಯೇ ಈ ಗಲಾಟೆ ನಡೆದಿದೆ. ಕೆಪಿಸಿಸಿ ಸಿಬ್ಬಂದಿಗಳು ಇಬ್ಬರನ್ನೂ ಪ್ರತ್ಯೇಕ ರೂಮಿನಲ್ಲಿ ಕೂರಿಸಿ ಸಮಧಾನಪಡಿಸಿದ್ದಾರೆ. ಕೆಲ ಸಮಯದ ಬಳಿಕ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಅವರು ಕೆಪಿಸಿಸಿ ಕಚೇರಿಯಿಂದ ಹೊರನಡೆದರು.
ಘಟನೆ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮಾತನಾಡಿ, ಯಾವುದೇ ಗಲಾಟೆ ನಡೆದಿಲ್ಲ. ಬೆಳಗ್ಗೆ ಪಂಚಾಯಿತಿ ಸದಸ್ಯರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಅವರು ನಮ್ಮ ಸದಸ್ಯರನ್ನ ಸೆಳೆಯುವ ಕೆಲಸ ಮಾಡಿದ್ದರು. ಆ ವಿಚಾರವಾಗಿ ಜೋರುಜೋರು ಮಾತು ನಡೆಯಿತು. ಆದ್ರೆ, ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ. ನಾವು ಬಾಗಿಲು ಹಾಕಿ ಪಕ್ಷದ ವಿಚಾರ ಚರ್ಚೆ ಮಾಡಿದ್ದೇವೆ. ಚರ್ಚೆಯನ್ನ ಹೊರತುಪಡಿಸಿ ಬೇರೆ ಏನು ನಡೆದಿಲ್ಲ ಎಂದರು.



