Connect with us

Dvgsuddi Kannada | online news portal | Kannada news online

ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿಲ್ಲ, ಮುಂದೆಯೂ ನೀಡಲ್ಲ: ಈಶ್ವರಪ್ಪ

ಪ್ರಮುಖ ಸುದ್ದಿ

ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿಲ್ಲ, ಮುಂದೆಯೂ ನೀಡಲ್ಲ: ಈಶ್ವರಪ್ಪ

ಬೆಂಗಳೂರು: , ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಯವುದೇ ದೂರು ಕೊಟ್ಟಿಲ್ಲ. ಮುಂದೆಯೂ ಅವರ ವಿರುದ್ಧ ದೂರು ಕೊಡುವುದಿಲ್ಲ. ರಾಜ್ಯಪಾಲ ವಿಆರ್ ವಾಲಾ ಅವರು ಗುಜರಾತ್ ರಾಜ್ಯದಲ್ಲಿ ಆರ್ಥಿಕ ಸಚಿವರಾಗಿದ್ದವರು. ಇಲಾಖೆಯ ಆರ್ಥಿಕತೆ ಅನುದಾನದ ಬಗ್ಗೆ ಸ್ಪಷ್ಟೀಕರಣಕ್ಕಾಗಿ ಅವರ ಬಳಿ ಹೋಗಿದ್ದೆ ಹೊರತು ಯಡಿಯೂರಪ್ಪ ವಿರುದ್ಧ ದೂರು ನೀಡಲು ಅಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ,  ನನ್ನ ಜೀವನದಲ್ಲಿ ನಾನು ಎಂದಿಗೂ ಸ್ಫೋಟವಾಗುವುದಿಲ್ಲ. ಸತ್ಯ ಕಂಡಾಗ ಮುನ್ನುಗುತ್ತೇನೆ. ಯಾರ ಕತ್ತು ಕೊಯ್ದು ದಾರಿ ತಪ್ಪುವುದಿಲ್ಲ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಸಿ.ಟಿ ರವಿ, ಪಕ್ಷದ ನಾಯಕರು. ಅವರ ಗಮನಕ್ಕೆ ಇಲಾಖೆಯ ವಿಚಾರವನ್ನು ತಂದಿದ್ದೆ. ಪಕ್ಷದ ನಾಯಕರ ಗಮನಕ್ಕೆ ತರದೇ ಪ್ರತಿಪಕ್ಷದ ಹೆಚ್.ಡಿ.ದೇವೇಗೌಡ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ದೂರು ಕೊಡಲು ಆಗುತ್ತದೆಯೇ? ಎಂದರು.

ಅಮಿತ್ ಶಾ, ಸಿ.ಟಿ ರವಿ, ಅರುಣ್ ಸಿಂಗ್ ಎಲ್ಲರೂ ಬಿಜೆಪಿ ಪಕ್ಷದ ಕುಟುಂಬ ಸದಸ್ಯರು.  ಅವರ ಗಮನಕ್ಕೆ ತಂದಿದ್ದೇನೆಯೇ ಹೊರತು ಯಡಿಯೂರಪ್ಪ ವಿರುದ್ಧ ದೂರು ಕೊಟ್ಟಿಲ್ಲ. ಬೇರೆ ಇಲಾಖೆಯಲ್ಲಿ ನೇರವಾಗಿ ಸಿಎಂ ಹಸ್ತಕ್ಷೇಪ ಮಾಡಲು ಬರುವುದಿಲ್ಲ. ಈ ಬಗ್ಗೆ ಹೆಚ್ಚು ಚರ್ಚೆಯ ಅವಶ್ಯಕತೆಯಾಗಲೀ ಮಾತಾಗಲೀ ಬೇಡ ಎಂದರು

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top